ಕಳಪೆ ಗುಣಮಟ್ಟದ ಅಡಿಕೆ | 8 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ ಪಡಿಸಿಕೊಂಡ ನಾಗಪುರದ ಪೊಲೀಸರು |

October 8, 2022
11:06 PM

ನಾಗಪುರದ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಅವರು ಕಳಪೆ ಅಡಿಕೆಯ ಸರಬರಾಜು ಪತ್ತೆ ಕಾರ್ಯಾಚರಣೆ ಮಾಡಿದ್ದರು. ಈ ಸಂದರ್ಭ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದು ತಿನ್ನಲು ಯೋಗ್ಯವಲ್ಲ ಎಂದು  ಆಹಾರ ಮತ್ತು ಔಷಧ ಆಡಳಿತ ಇಲಾಖೆಗೆ (ಎಫ್ ಡಿಎ) ಹೇಳಿದೆ. 

ವಶಪಡಿಸಿಕೊಂಡ ಸುಮಾರು 8 ಕೋಟಿ ಮೌಲ್ಯದ ಅಡಿಕೆಯ ಮಾದರಿ ತೆಗೆದುಕೊಳ್ಳಲಾಗಿದ್ದು ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿವೆ. ಅಂದರೆ ಈ ಅಡಿಕೆ ತಿನ್ನಲು ಯೋಗ್ಯವಿಲ್ಲ ಎಂದು ಆಹಾರ ಮತ್ತು ಔಷಧ ಆಡಳಿತ ಇಲಾಖೆ ಹೇಳಿತ್ತು. ಈ ನಡುವೆ ಕಳ್ಳದಾರಿಯ ಮೂಲಕ ದೇಶದ ವಿವಿದೆಡೆಗೆ  ಅದೇ ಮಾದರಿಯ ಅಡಿಕೆ ಬರುತ್ತಿದೆ. ಪೊಲೀಸರಿಗೆ ಸುಳಿವು ಸಿಗದಂತೆ ಹಲವು ಕಡೆಗೆ ಸಾಗಿಸುವುದು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಡಿಕೆ ದಾಸ್ತಾನು ಮಾಡುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಆಮದು ಮಾಡಿದ ಅಡಿಕೆಯನ್ನು ಕೆಲವು ಕಡೆ ಸುರಿದು ಇಲ್ಲಿನ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡಲಾಗುತ್ತಿದೆ.

ಆದರೆ ಮುಂಬೈ ಕೆಲವು ಪ್ರದೇಶದ ವ್ಯಾಪಾರಿಗಳು ತಪ್ಪು ಮಾಹಿತಿ ನೀಡಿ ಬೇರೆ ಬೇರೆ ಬಂದರಿನಲ್ಲಿ ಸರಕುಗಳನ್ನು ಆರ್ಡರ್ ಮಾಡುತ್ತಾರೆ.  ಪ್ಲಾಸ್ಟಿಕ್ ಸರಕುಗಳ ಹೆಸರಿನಲ್ಲಿ 4.60 ಕೋಟಿ ರೂ. ಹಾಗೂ ಅದೇ ರೀತಿ ಮುಂದ್ರಾ ಬಂದರಿನಿಂದ ಕಂಟೈನರ್ ಗಳಲ್ಲಿ ಸರಕು ತರಲಾಗುತ್ತಿದೆ. ಈ ರೀತಿಯ ಕಳಪೆ ಅಡಿಕೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಅಡಿಕೆ ಆಮದು ಮೇಲೆ ಶೇ.100  ಸುಂಕ ಇದ್ದದೂ ಕದ್ದು ಆಮದು ಮಾಡಲಾಗುತ್ತಿದೆ. ಇದರಿಂದ  ಕೇಂದ್ರ ಸರ್ಕಾರಕ್ಕೆ ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿದೆ. ಕೆಲವು ಇಲಾಖೆಗಳೂ ಮೌನವಾಗಿದೆ. ಹೀಗಾಗಿ ಅಡಿಕೆ ಆಮದು ಭಾರತದ ಕೃಷಿಕರ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror