Advertisement
ಸುದ್ದಿಗಳು

ಕಳಪೆ ಗುಣಮಟ್ಟದ ಅಡಿಕೆ | 8 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ ಪಡಿಸಿಕೊಂಡ ನಾಗಪುರದ ಪೊಲೀಸರು |

Share

ನಾಗಪುರದ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಅವರು ಕಳಪೆ ಅಡಿಕೆಯ ಸರಬರಾಜು ಪತ್ತೆ ಕಾರ್ಯಾಚರಣೆ ಮಾಡಿದ್ದರು. ಈ ಸಂದರ್ಭ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದು ತಿನ್ನಲು ಯೋಗ್ಯವಲ್ಲ ಎಂದು  ಆಹಾರ ಮತ್ತು ಔಷಧ ಆಡಳಿತ ಇಲಾಖೆಗೆ (ಎಫ್ ಡಿಎ) ಹೇಳಿದೆ. 

Advertisement
Advertisement
Advertisement
Advertisement

ವಶಪಡಿಸಿಕೊಂಡ ಸುಮಾರು 8 ಕೋಟಿ ಮೌಲ್ಯದ ಅಡಿಕೆಯ ಮಾದರಿ ತೆಗೆದುಕೊಳ್ಳಲಾಗಿದ್ದು ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿವೆ. ಅಂದರೆ ಈ ಅಡಿಕೆ ತಿನ್ನಲು ಯೋಗ್ಯವಿಲ್ಲ ಎಂದು ಆಹಾರ ಮತ್ತು ಔಷಧ ಆಡಳಿತ ಇಲಾಖೆ ಹೇಳಿತ್ತು. ಈ ನಡುವೆ ಕಳ್ಳದಾರಿಯ ಮೂಲಕ ದೇಶದ ವಿವಿದೆಡೆಗೆ  ಅದೇ ಮಾದರಿಯ ಅಡಿಕೆ ಬರುತ್ತಿದೆ. ಪೊಲೀಸರಿಗೆ ಸುಳಿವು ಸಿಗದಂತೆ ಹಲವು ಕಡೆಗೆ ಸಾಗಿಸುವುದು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಡಿಕೆ ದಾಸ್ತಾನು ಮಾಡುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಆಮದು ಮಾಡಿದ ಅಡಿಕೆಯನ್ನು ಕೆಲವು ಕಡೆ ಸುರಿದು ಇಲ್ಲಿನ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡಲಾಗುತ್ತಿದೆ.

Advertisement

ಆದರೆ ಮುಂಬೈ ಕೆಲವು ಪ್ರದೇಶದ ವ್ಯಾಪಾರಿಗಳು ತಪ್ಪು ಮಾಹಿತಿ ನೀಡಿ ಬೇರೆ ಬೇರೆ ಬಂದರಿನಲ್ಲಿ ಸರಕುಗಳನ್ನು ಆರ್ಡರ್ ಮಾಡುತ್ತಾರೆ.  ಪ್ಲಾಸ್ಟಿಕ್ ಸರಕುಗಳ ಹೆಸರಿನಲ್ಲಿ 4.60 ಕೋಟಿ ರೂ. ಹಾಗೂ ಅದೇ ರೀತಿ ಮುಂದ್ರಾ ಬಂದರಿನಿಂದ ಕಂಟೈನರ್ ಗಳಲ್ಲಿ ಸರಕು ತರಲಾಗುತ್ತಿದೆ. ಈ ರೀತಿಯ ಕಳಪೆ ಅಡಿಕೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಅಡಿಕೆ ಆಮದು ಮೇಲೆ ಶೇ.100  ಸುಂಕ ಇದ್ದದೂ ಕದ್ದು ಆಮದು ಮಾಡಲಾಗುತ್ತಿದೆ. ಇದರಿಂದ  ಕೇಂದ್ರ ಸರ್ಕಾರಕ್ಕೆ ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿದೆ. ಕೆಲವು ಇಲಾಖೆಗಳೂ ಮೌನವಾಗಿದೆ. ಹೀಗಾಗಿ ಅಡಿಕೆ ಆಮದು ಭಾರತದ ಕೃಷಿಕರ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

3 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

4 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

4 days ago