ಸುದ್ದಿಗಳು

ಕಳಪೆ ಗುಣಮಟ್ಟದ ಅಡಿಕೆ | 8 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ ಪಡಿಸಿಕೊಂಡ ನಾಗಪುರದ ಪೊಲೀಸರು |

Share

ನಾಗಪುರದ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಅವರು ಕಳಪೆ ಅಡಿಕೆಯ ಸರಬರಾಜು ಪತ್ತೆ ಕಾರ್ಯಾಚರಣೆ ಮಾಡಿದ್ದರು. ಈ ಸಂದರ್ಭ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದು ತಿನ್ನಲು ಯೋಗ್ಯವಲ್ಲ ಎಂದು  ಆಹಾರ ಮತ್ತು ಔಷಧ ಆಡಳಿತ ಇಲಾಖೆಗೆ (ಎಫ್ ಡಿಎ) ಹೇಳಿದೆ. 

ವಶಪಡಿಸಿಕೊಂಡ ಸುಮಾರು 8 ಕೋಟಿ ಮೌಲ್ಯದ ಅಡಿಕೆಯ ಮಾದರಿ ತೆಗೆದುಕೊಳ್ಳಲಾಗಿದ್ದು ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿವೆ. ಅಂದರೆ ಈ ಅಡಿಕೆ ತಿನ್ನಲು ಯೋಗ್ಯವಿಲ್ಲ ಎಂದು ಆಹಾರ ಮತ್ತು ಔಷಧ ಆಡಳಿತ ಇಲಾಖೆ ಹೇಳಿತ್ತು. ಈ ನಡುವೆ ಕಳ್ಳದಾರಿಯ ಮೂಲಕ ದೇಶದ ವಿವಿದೆಡೆಗೆ  ಅದೇ ಮಾದರಿಯ ಅಡಿಕೆ ಬರುತ್ತಿದೆ. ಪೊಲೀಸರಿಗೆ ಸುಳಿವು ಸಿಗದಂತೆ ಹಲವು ಕಡೆಗೆ ಸಾಗಿಸುವುದು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಡಿಕೆ ದಾಸ್ತಾನು ಮಾಡುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಆಮದು ಮಾಡಿದ ಅಡಿಕೆಯನ್ನು ಕೆಲವು ಕಡೆ ಸುರಿದು ಇಲ್ಲಿನ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡಲಾಗುತ್ತಿದೆ.

ಆದರೆ ಮುಂಬೈ ಕೆಲವು ಪ್ರದೇಶದ ವ್ಯಾಪಾರಿಗಳು ತಪ್ಪು ಮಾಹಿತಿ ನೀಡಿ ಬೇರೆ ಬೇರೆ ಬಂದರಿನಲ್ಲಿ ಸರಕುಗಳನ್ನು ಆರ್ಡರ್ ಮಾಡುತ್ತಾರೆ.  ಪ್ಲಾಸ್ಟಿಕ್ ಸರಕುಗಳ ಹೆಸರಿನಲ್ಲಿ 4.60 ಕೋಟಿ ರೂ. ಹಾಗೂ ಅದೇ ರೀತಿ ಮುಂದ್ರಾ ಬಂದರಿನಿಂದ ಕಂಟೈನರ್ ಗಳಲ್ಲಿ ಸರಕು ತರಲಾಗುತ್ತಿದೆ. ಈ ರೀತಿಯ ಕಳಪೆ ಅಡಿಕೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಅಡಿಕೆ ಆಮದು ಮೇಲೆ ಶೇ.100  ಸುಂಕ ಇದ್ದದೂ ಕದ್ದು ಆಮದು ಮಾಡಲಾಗುತ್ತಿದೆ. ಇದರಿಂದ  ಕೇಂದ್ರ ಸರ್ಕಾರಕ್ಕೆ ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿದೆ. ಕೆಲವು ಇಲಾಖೆಗಳೂ ಮೌನವಾಗಿದೆ. ಹೀಗಾಗಿ ಅಡಿಕೆ ಆಮದು ಭಾರತದ ಕೃಷಿಕರ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

3 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

4 hours ago

ಸ್ತ್ರೀಯರ ಸಬಲೀಕರಣದ ಹೊಸ ಸವಾಲುಗಳು

ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…

4 hours ago

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |

ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…

13 hours ago

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…

15 hours ago

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

15 hours ago