Advertisement
ಸುದ್ದಿಗಳು

ಕಳಪೆ ಗುಣಮಟ್ಟದ ಅಡಿಕೆ | 8 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ ಪಡಿಸಿಕೊಂಡ ನಾಗಪುರದ ಪೊಲೀಸರು |

Share

ನಾಗಪುರದ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಅವರು ಕಳಪೆ ಅಡಿಕೆಯ ಸರಬರಾಜು ಪತ್ತೆ ಕಾರ್ಯಾಚರಣೆ ಮಾಡಿದ್ದರು. ಈ ಸಂದರ್ಭ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದು ತಿನ್ನಲು ಯೋಗ್ಯವಲ್ಲ ಎಂದು  ಆಹಾರ ಮತ್ತು ಔಷಧ ಆಡಳಿತ ಇಲಾಖೆಗೆ (ಎಫ್ ಡಿಎ) ಹೇಳಿದೆ. 

Advertisement

ವಶಪಡಿಸಿಕೊಂಡ ಸುಮಾರು 8 ಕೋಟಿ ಮೌಲ್ಯದ ಅಡಿಕೆಯ ಮಾದರಿ ತೆಗೆದುಕೊಳ್ಳಲಾಗಿದ್ದು ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿವೆ. ಅಂದರೆ ಈ ಅಡಿಕೆ ತಿನ್ನಲು ಯೋಗ್ಯವಿಲ್ಲ ಎಂದು ಆಹಾರ ಮತ್ತು ಔಷಧ ಆಡಳಿತ ಇಲಾಖೆ ಹೇಳಿತ್ತು. ಈ ನಡುವೆ ಕಳ್ಳದಾರಿಯ ಮೂಲಕ ದೇಶದ ವಿವಿದೆಡೆಗೆ  ಅದೇ ಮಾದರಿಯ ಅಡಿಕೆ ಬರುತ್ತಿದೆ. ಪೊಲೀಸರಿಗೆ ಸುಳಿವು ಸಿಗದಂತೆ ಹಲವು ಕಡೆಗೆ ಸಾಗಿಸುವುದು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಡಿಕೆ ದಾಸ್ತಾನು ಮಾಡುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಆಮದು ಮಾಡಿದ ಅಡಿಕೆಯನ್ನು ಕೆಲವು ಕಡೆ ಸುರಿದು ಇಲ್ಲಿನ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡಲಾಗುತ್ತಿದೆ.

ಆದರೆ ಮುಂಬೈ ಕೆಲವು ಪ್ರದೇಶದ ವ್ಯಾಪಾರಿಗಳು ತಪ್ಪು ಮಾಹಿತಿ ನೀಡಿ ಬೇರೆ ಬೇರೆ ಬಂದರಿನಲ್ಲಿ ಸರಕುಗಳನ್ನು ಆರ್ಡರ್ ಮಾಡುತ್ತಾರೆ.  ಪ್ಲಾಸ್ಟಿಕ್ ಸರಕುಗಳ ಹೆಸರಿನಲ್ಲಿ 4.60 ಕೋಟಿ ರೂ. ಹಾಗೂ ಅದೇ ರೀತಿ ಮುಂದ್ರಾ ಬಂದರಿನಿಂದ ಕಂಟೈನರ್ ಗಳಲ್ಲಿ ಸರಕು ತರಲಾಗುತ್ತಿದೆ. ಈ ರೀತಿಯ ಕಳಪೆ ಅಡಿಕೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಅಡಿಕೆ ಆಮದು ಮೇಲೆ ಶೇ.100  ಸುಂಕ ಇದ್ದದೂ ಕದ್ದು ಆಮದು ಮಾಡಲಾಗುತ್ತಿದೆ. ಇದರಿಂದ  ಕೇಂದ್ರ ಸರ್ಕಾರಕ್ಕೆ ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿದೆ. ಕೆಲವು ಇಲಾಖೆಗಳೂ ಮೌನವಾಗಿದೆ. ಹೀಗಾಗಿ ಅಡಿಕೆ ಆಮದು ಭಾರತದ ಕೃಷಿಕರ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

16 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

24 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

24 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

1 day ago