Advertisement
ಸುದ್ದಿಗಳು

ಕಳಪೆ ಗುಣಮಟ್ಟದ ಅಡಿಕೆ | 8 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ ಪಡಿಸಿಕೊಂಡ ನಾಗಪುರದ ಪೊಲೀಸರು |

Share

ನಾಗಪುರದ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಅವರು ಕಳಪೆ ಅಡಿಕೆಯ ಸರಬರಾಜು ಪತ್ತೆ ಕಾರ್ಯಾಚರಣೆ ಮಾಡಿದ್ದರು. ಈ ಸಂದರ್ಭ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದು ತಿನ್ನಲು ಯೋಗ್ಯವಲ್ಲ ಎಂದು  ಆಹಾರ ಮತ್ತು ಔಷಧ ಆಡಳಿತ ಇಲಾಖೆಗೆ (ಎಫ್ ಡಿಎ) ಹೇಳಿದೆ. 

ವಶಪಡಿಸಿಕೊಂಡ ಸುಮಾರು 8 ಕೋಟಿ ಮೌಲ್ಯದ ಅಡಿಕೆಯ ಮಾದರಿ ತೆಗೆದುಕೊಳ್ಳಲಾಗಿದ್ದು ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿವೆ. ಅಂದರೆ ಈ ಅಡಿಕೆ ತಿನ್ನಲು ಯೋಗ್ಯವಿಲ್ಲ ಎಂದು ಆಹಾರ ಮತ್ತು ಔಷಧ ಆಡಳಿತ ಇಲಾಖೆ ಹೇಳಿತ್ತು. ಈ ನಡುವೆ ಕಳ್ಳದಾರಿಯ ಮೂಲಕ ದೇಶದ ವಿವಿದೆಡೆಗೆ  ಅದೇ ಮಾದರಿಯ ಅಡಿಕೆ ಬರುತ್ತಿದೆ. ಪೊಲೀಸರಿಗೆ ಸುಳಿವು ಸಿಗದಂತೆ ಹಲವು ಕಡೆಗೆ ಸಾಗಿಸುವುದು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಡಿಕೆ ದಾಸ್ತಾನು ಮಾಡುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಆಮದು ಮಾಡಿದ ಅಡಿಕೆಯನ್ನು ಕೆಲವು ಕಡೆ ಸುರಿದು ಇಲ್ಲಿನ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡಲಾಗುತ್ತಿದೆ.

ಆದರೆ ಮುಂಬೈ ಕೆಲವು ಪ್ರದೇಶದ ವ್ಯಾಪಾರಿಗಳು ತಪ್ಪು ಮಾಹಿತಿ ನೀಡಿ ಬೇರೆ ಬೇರೆ ಬಂದರಿನಲ್ಲಿ ಸರಕುಗಳನ್ನು ಆರ್ಡರ್ ಮಾಡುತ್ತಾರೆ.  ಪ್ಲಾಸ್ಟಿಕ್ ಸರಕುಗಳ ಹೆಸರಿನಲ್ಲಿ 4.60 ಕೋಟಿ ರೂ. ಹಾಗೂ ಅದೇ ರೀತಿ ಮುಂದ್ರಾ ಬಂದರಿನಿಂದ ಕಂಟೈನರ್ ಗಳಲ್ಲಿ ಸರಕು ತರಲಾಗುತ್ತಿದೆ. ಈ ರೀತಿಯ ಕಳಪೆ ಅಡಿಕೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಅಡಿಕೆ ಆಮದು ಮೇಲೆ ಶೇ.100  ಸುಂಕ ಇದ್ದದೂ ಕದ್ದು ಆಮದು ಮಾಡಲಾಗುತ್ತಿದೆ. ಇದರಿಂದ  ಕೇಂದ್ರ ಸರ್ಕಾರಕ್ಕೆ ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿದೆ. ಕೆಲವು ಇಲಾಖೆಗಳೂ ಮೌನವಾಗಿದೆ. ಹೀಗಾಗಿ ಅಡಿಕೆ ಆಮದು ಭಾರತದ ಕೃಷಿಕರ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

1 hour ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

2 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

8 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

9 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

9 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

11 hours ago