ಉತ್ತಮ ಮೌಲ್ಯವಿರುವ ಉತ್ತಮ ನಾಗರಿಕರನ್ನು ಸಮಾಜಕ್ಕೆ ನೀಡಿ | ರೆ|ಫಾ| ಜೋರ್ಜ್ ಅಯ್ಯನೇತ್ ಕರೆ|

October 13, 2021
11:51 PM

ಜೀವನದಲ್ಲಿ ಉತ್ತಮ ಶಿಸ್ತು ಹಾಗೂ ವೃತ್ತಿ ಕೌಶಲ್ಯಗಳನ್ನು ರೂಢಿಸಿಕೊಂಡು ವಿದ್ಯಾರ್ಥಿಗಳೊಂದಿಗೆ ಮಿತ್ರರಂತೆ ವರ್ತಿಸಿದರೆ ಮಕ್ಕಳ ಸರ್ವತ್ತೋಮುಖ ಬೆಳವಣಿಗೆ ಸಾಧ್ಯ ಎಂದು ಬೆಥನಿ ನವಜ್ಯೋತಿ ಪ್ರೊವಿನ್ಸಿನ ಪ್ರೊವಿನ್ಶಿಯಲ್ ಸುಪೀರಿಯರ್ , ದೀಪಿಕಾ ಮಲಯಾಳಂ ಪತ್ರಿಕೆಯ ಅಂಕಣ ಬರಹಗಾರರು ಹಾಗೂ ಉತ್ತಮ ಸಾಹಿತಿಗಳೂ ರೆ|ಫಾ| ಜೋರ್ಜ್ ಅಯ್ಯನೇತ್ ಹೇಳಿದರು.

ಅವರು ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ಅಧಿಕೃತ ಭೇಟಿ ಕಾರ್ಯಕ್ರಮದ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು. ಉತ್ತಮ ಮೌಲ್ಯವಿರುವ ಉತ್ತಮ ನಾಗರಿಕರನ್ನು ಸಮಾಜಕ್ಕೆ ನೀಡಿ ಉತ್ತಮ ಮೌಲ್ಯಭರಿತ ಭಾರತೀಯ ಸಂಸ್ಕೃತಿಯ ವಾಹಕರಾಗಬೇಕೆಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು. ನಿದ್ರೆಯಲ್ಲಿ ಎನು ಮಾಡಲು ಸಾಧ್ಯವಿಲ್ಲ ಎಚ್ಚರದಿಂದಿರುವಾಗ ಮಾತ್ರ ಹೊಸತನ್ನು ಮಾಡಲು ಸಾಧ್ಯ . ಆದುದರಿಂದ ಶಿಕ್ಷಕರಾದವರು ಪ್ರತಿದಿನ ಹೊಸತನ್ನು ಕಲಿಯಬೇಕೆಂದೂ ಹೇಳಿದರು.

ವೇದಿಕೆಯಲ್ಲಿ ,ಆಡಳಿತ ಮಂಡಳಿಯ ಮೊದಲ ಸಲಹೆಗಾರರೂ ಬೆಥನಿ ನವಜ್ಯೋತಿ ಪ್ರೊವಿನ್ಸಿನ ಶಿಕ್ಷಣ ಕ್ಷೇತ್ರದ ಅಧಿಕಾರಿಯೂ ಆದ ರೆ|ಡಾ|ಫಾ| ವರ್ಗೀಸ್ ಕೈಪನಡ್ಕ ಒ.ಐ.ಸಿ, ಪ್ರೊವಿನ್ಶಿಯಲ್ ಕೋಶಾಧಿಕಾರಿಯಾದ ರೆ|ಫಾ| ಜೇಕಬ್ ಈಟಿತಡತ್ತಿಲ್ ಒ.ಐ.ಸಿ , ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ|ತೋಮಸ್ ಬಿಜಿಲಿ ಒ.ಐ.ಸಿ ಹಾಗೂ ಸಂಸ್ಥೆಯ ಉಪ ಪ್ರಾಂಶುಪಾಲರಾದ ಜೋಸ್ ಎಂ.ಜೆ. ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ|ತೋಮಸ್ ಬಿಜಿಲಿ ಒ.ಐ.ಸಿ ಸ್ವಾಗತಿಸಿ, ಶಿಕ್ಷಕಿ ಪೂರ್ಣಿಮ ಶೆಣೈ ವಂದಿಸಿದರು. ಶಿಕ್ಷಕಿ ಮಂಜು ಫಿಲಿಪ್ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಶಿಕ್ಷಕರೊಂದಿಗೆ ಮಕ್ತ ಚರ್ಚೆಗಳು ನಡೆಸಿ ಸಂಸ್ಥೆಯ ಬೆಳವಣಿಗೆಯ ಬಗ್ಗೆ ಸಮಾಲೋಚನೆ ನಡೆಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror