Advertisement
ಸುದ್ದಿಗಳು

ಉತ್ತಮ ಮೌಲ್ಯವಿರುವ ಉತ್ತಮ ನಾಗರಿಕರನ್ನು ಸಮಾಜಕ್ಕೆ ನೀಡಿ | ರೆ|ಫಾ| ಜೋರ್ಜ್ ಅಯ್ಯನೇತ್ ಕರೆ|

Share

ಜೀವನದಲ್ಲಿ ಉತ್ತಮ ಶಿಸ್ತು ಹಾಗೂ ವೃತ್ತಿ ಕೌಶಲ್ಯಗಳನ್ನು ರೂಢಿಸಿಕೊಂಡು ವಿದ್ಯಾರ್ಥಿಗಳೊಂದಿಗೆ ಮಿತ್ರರಂತೆ ವರ್ತಿಸಿದರೆ ಮಕ್ಕಳ ಸರ್ವತ್ತೋಮುಖ ಬೆಳವಣಿಗೆ ಸಾಧ್ಯ ಎಂದು ಬೆಥನಿ ನವಜ್ಯೋತಿ ಪ್ರೊವಿನ್ಸಿನ ಪ್ರೊವಿನ್ಶಿಯಲ್ ಸುಪೀರಿಯರ್ , ದೀಪಿಕಾ ಮಲಯಾಳಂ ಪತ್ರಿಕೆಯ ಅಂಕಣ ಬರಹಗಾರರು ಹಾಗೂ ಉತ್ತಮ ಸಾಹಿತಿಗಳೂ ರೆ|ಫಾ| ಜೋರ್ಜ್ ಅಯ್ಯನೇತ್ ಹೇಳಿದರು.

Advertisement
Advertisement
Advertisement
Advertisement
Advertisement

ಅವರು ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ಅಧಿಕೃತ ಭೇಟಿ ಕಾರ್ಯಕ್ರಮದ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು. ಉತ್ತಮ ಮೌಲ್ಯವಿರುವ ಉತ್ತಮ ನಾಗರಿಕರನ್ನು ಸಮಾಜಕ್ಕೆ ನೀಡಿ ಉತ್ತಮ ಮೌಲ್ಯಭರಿತ ಭಾರತೀಯ ಸಂಸ್ಕೃತಿಯ ವಾಹಕರಾಗಬೇಕೆಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು. ನಿದ್ರೆಯಲ್ಲಿ ಎನು ಮಾಡಲು ಸಾಧ್ಯವಿಲ್ಲ ಎಚ್ಚರದಿಂದಿರುವಾಗ ಮಾತ್ರ ಹೊಸತನ್ನು ಮಾಡಲು ಸಾಧ್ಯ . ಆದುದರಿಂದ ಶಿಕ್ಷಕರಾದವರು ಪ್ರತಿದಿನ ಹೊಸತನ್ನು ಕಲಿಯಬೇಕೆಂದೂ ಹೇಳಿದರು.

Advertisement

ವೇದಿಕೆಯಲ್ಲಿ ,ಆಡಳಿತ ಮಂಡಳಿಯ ಮೊದಲ ಸಲಹೆಗಾರರೂ ಬೆಥನಿ ನವಜ್ಯೋತಿ ಪ್ರೊವಿನ್ಸಿನ ಶಿಕ್ಷಣ ಕ್ಷೇತ್ರದ ಅಧಿಕಾರಿಯೂ ಆದ ರೆ|ಡಾ|ಫಾ| ವರ್ಗೀಸ್ ಕೈಪನಡ್ಕ ಒ.ಐ.ಸಿ, ಪ್ರೊವಿನ್ಶಿಯಲ್ ಕೋಶಾಧಿಕಾರಿಯಾದ ರೆ|ಫಾ| ಜೇಕಬ್ ಈಟಿತಡತ್ತಿಲ್ ಒ.ಐ.ಸಿ , ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ|ತೋಮಸ್ ಬಿಜಿಲಿ ಒ.ಐ.ಸಿ ಹಾಗೂ ಸಂಸ್ಥೆಯ ಉಪ ಪ್ರಾಂಶುಪಾಲರಾದ ಜೋಸ್ ಎಂ.ಜೆ. ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ|ತೋಮಸ್ ಬಿಜಿಲಿ ಒ.ಐ.ಸಿ ಸ್ವಾಗತಿಸಿ, ಶಿಕ್ಷಕಿ ಪೂರ್ಣಿಮ ಶೆಣೈ ವಂದಿಸಿದರು. ಶಿಕ್ಷಕಿ ಮಂಜು ಫಿಲಿಪ್ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಶಿಕ್ಷಕರೊಂದಿಗೆ ಮಕ್ತ ಚರ್ಚೆಗಳು ನಡೆಸಿ ಸಂಸ್ಥೆಯ ಬೆಳವಣಿಗೆಯ ಬಗ್ಗೆ ಸಮಾಲೋಚನೆ ನಡೆಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭೂಮಿ,ಕಾವೇರಿ 2.0 ತಂತ್ರಾಂಶ ಲೋಪದೋಷ ನಿವಾರಣೆಗೆ ಕ್ರಮ

ವಿಧಾನ ಪರಿಷತ್  ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…

2 hours ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…

2 hours ago

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ | ಪಂಪ್ ಸೆಟ್‌ಗಳಿಗೆ 7 ಗಂಟೆ ವಿದ್ಯುತ್ | ವಿದ್ಯುತ್ ಲೈನ್ ಗಳ ದೋಷ ಸರಿಪಡಿಸಲು ಕ್ರಮ | ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಒತ್ತು |

ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ  ವಿದ್ಯುತ್ ಮಾರ್ಗವನ್ನು ಮತ್ತಷ್ಟು…

2 hours ago

ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…

3 hours ago

ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ…

3 hours ago

ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…

4 hours ago