Advertisement
The Rural Mirror ಕಾಳಜಿ

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |

Share

ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ ತಿಂಗಳಲ್ಲಿ ಎರಡು ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ ಒಂದು ಪ್ರಕರಣ ನಡೆದಿದ್ದರೆ ಇನ್ನೊಂದು ಪ್ರಕರಣ ಅಹಮದಾಬಾದ್‌ನಿಂದ ವರದಿಯಾಗಿದೆ. ಅಡಿಕೆ ಬೆಳೆಗಾರರು ಇಂತಹ ಸಮಯದಲ್ಲಿ ಎಚ್ಚರ ಇರಬೇಕಾದ್ದು ಅಗತ್ಯವಾಗಿದೆ.………ಮುಂದೆ ಓದಿ……..

ಮಂಗಳೂರು ಭಗವತೀನಗರ ಮಣ್ಣಗುಡ್ಡದಲ್ಲಿ ವಾಸವಾಗಿರುವ ಕಮಲ್‌ ಕಾಂತ್‌ ಶರ್ಮಾ ಬೆಟ್ಟಂಪಾಡಿಯಲ್ಲಿ ಪಾರಸ್‌ ಟ್ರೇಡರ್ಸ್‌ ಎಂಬ ಅಡಿಕೆ ಗಾರ್ಬಲ್‌ ನಡೆಸುತ್ತಿದ್ದರು. ಅಡಿಕೆ ವ್ಯವಹಾರವನ್ನು ಛತ್ತೀಸ್‌ಗಢದ ಲಲಿತ್‌ ಜೈನ್‌ ಮತ್ತು ಪ್ರೇಕ್ಷಾ ಜೈನ್‌ ಅವರ ಮಾಲಕತ್ವದ ಕಂಪೆನಿಯೊಂದಿಗೆ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಲಲಿತ್‌ ಜೈನ್‌ ಮತ್ತು ಪ್ರೇಕ್ಷಾ ಜೈನ್‌ ಅವರು ಒಟ್ಟು ರೂ.2,76,00,300 ಬೆಲೆಯ ಅಡಿಕೆಯನ್ನು ಖರೀದಿಸಿಕೊಂಡು ಹಣವನ್ನು ನೀಡಿಲ್ಲ. ದೂರವಾಣಿ ಕರೆ ಮಾಡಿದಾಗ ಸ್ವೀಕರಿಸದೇ ಇದ್ದು, ಕೆಲವು ದಿನಗಳಿಂದ ಮೊಬೈಲ್‌ ಪೋನ್‌ ಸ್ವಿಚ್‌ ಆಪ್‌ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಾಗಿ ಕೆಲವೇ ದಿನದಲ್ಲಿ ರಾಜ್‌ಕೋಟ್ ಉದ್ಯಮಿಯಿಂದ 1.08 ಕೋಟಿ ರೂಪಾಯಿ ಪಡೆದು ವಂಚನೆ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಪ್ರಕರಣದಲ್ಲಿ
ಅಹಮದಾಬಾದ್‌ನ  ದಲ್ಲಾಳಿ ಮತ್ತು ಮೂವರು ವ್ಯಾಪಾರಿಗಳು ಸೇರಿದಂತೆ ಒಟ್ಟು ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಹಮದಾಬಾದ್‌ನಲ್ಲಿ ವಾಸಿಸುವ ಮನ್ಸೂರ್ ಅರಬಿಯಾನಿ ಎಂಬವರು ರಾಜ್‌ಕೋಟ್‌ನ ಅಡಿಕೆ ವ್ಯಾಪಾರಿ ಮಿತೇಶ್‌ಭಾಯ್ ಹರಿಲಾಲ್ ಸಯಾನಿ (41 ವರ್ಷ) ಅವರಿಂದ ಅಡಿಕೆ ಪಡೆದಿದ್ದರು. ಹಣ ಪಾವತಿಯಾಗದ ಕಾರಣದಿಂದ  1.08 ಕೋಟಿ ರೂ. ವಂಚನೆಯ ದೂರು ದಾಖಲಾಗಿದೆ.

ಅಡಿಕೆ ಧಾರಣೆ ಏರಿಳಿತ ಹಾಗೂ ಕಳೆದ ಕೆಲವು ಸಮಯಗಳಿಂದ ವಿಪರೀತ ಏರಿಕೆಯ ಸಮಯದಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ವ್ಯವಹಾರದಲ್ಲಿ ಕೆಲವರು ನಷ್ಟ ಅನುಭವಿಸಿದ್ದರು. ಅಂದಿನಿಂದ ಅಡಿಕೆ ವಹಿವಾಟಿನಲ್ಲಿ ಕೆಲವು ವ್ಯಾಪಾರಿಗಳು ಹಳಿ ತಪ್ಪಿದ್ದರು. ಇದೀಗ ಅಡಿಕೆ ವಹಿವಾಟು ಸರಿಯಾಗಿ ನಡೆಯುತ್ತಿದ್ದರೂ ಆರ್ಥಿಕ ಮುಗ್ಗಟ್ಟು ಮುಂದುವರಿದಿದೆ. ಅಡಿಕೆ ಮಾರುಕಟ್ಟೆ ಕೂಡಾ ಚೇತರಿಕೆ ಕಾಣುತ್ತಿದೆ. ಅಡಿಕೆ ಬೆಳೆಗಾರರು ಬಿಳಿ ಚೀಟು ವಹಿವಾಟಿನಲ್ಲಿ ಎಚ್ಚರ ಇರಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

1 hour ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

1 hour ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

1 hour ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

1 hour ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

1 hour ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

11 hours ago