Advertisement
The Rural Mirror ಕಾಳಜಿ

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |

Share

ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ ತಿಂಗಳಲ್ಲಿ ಎರಡು ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ ಒಂದು ಪ್ರಕರಣ ನಡೆದಿದ್ದರೆ ಇನ್ನೊಂದು ಪ್ರಕರಣ ಅಹಮದಾಬಾದ್‌ನಿಂದ ವರದಿಯಾಗಿದೆ. ಅಡಿಕೆ ಬೆಳೆಗಾರರು ಇಂತಹ ಸಮಯದಲ್ಲಿ ಎಚ್ಚರ ಇರಬೇಕಾದ್ದು ಅಗತ್ಯವಾಗಿದೆ.………ಮುಂದೆ ಓದಿ……..

ಮಂಗಳೂರು ಭಗವತೀನಗರ ಮಣ್ಣಗುಡ್ಡದಲ್ಲಿ ವಾಸವಾಗಿರುವ ಕಮಲ್‌ ಕಾಂತ್‌ ಶರ್ಮಾ ಬೆಟ್ಟಂಪಾಡಿಯಲ್ಲಿ ಪಾರಸ್‌ ಟ್ರೇಡರ್ಸ್‌ ಎಂಬ ಅಡಿಕೆ ಗಾರ್ಬಲ್‌ ನಡೆಸುತ್ತಿದ್ದರು. ಅಡಿಕೆ ವ್ಯವಹಾರವನ್ನು ಛತ್ತೀಸ್‌ಗಢದ ಲಲಿತ್‌ ಜೈನ್‌ ಮತ್ತು ಪ್ರೇಕ್ಷಾ ಜೈನ್‌ ಅವರ ಮಾಲಕತ್ವದ ಕಂಪೆನಿಯೊಂದಿಗೆ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಲಲಿತ್‌ ಜೈನ್‌ ಮತ್ತು ಪ್ರೇಕ್ಷಾ ಜೈನ್‌ ಅವರು ಒಟ್ಟು ರೂ.2,76,00,300 ಬೆಲೆಯ ಅಡಿಕೆಯನ್ನು ಖರೀದಿಸಿಕೊಂಡು ಹಣವನ್ನು ನೀಡಿಲ್ಲ. ದೂರವಾಣಿ ಕರೆ ಮಾಡಿದಾಗ ಸ್ವೀಕರಿಸದೇ ಇದ್ದು, ಕೆಲವು ದಿನಗಳಿಂದ ಮೊಬೈಲ್‌ ಪೋನ್‌ ಸ್ವಿಚ್‌ ಆಪ್‌ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಾಗಿ ಕೆಲವೇ ದಿನದಲ್ಲಿ ರಾಜ್‌ಕೋಟ್ ಉದ್ಯಮಿಯಿಂದ 1.08 ಕೋಟಿ ರೂಪಾಯಿ ಪಡೆದು ವಂಚನೆ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಪ್ರಕರಣದಲ್ಲಿ
ಅಹಮದಾಬಾದ್‌ನ  ದಲ್ಲಾಳಿ ಮತ್ತು ಮೂವರು ವ್ಯಾಪಾರಿಗಳು ಸೇರಿದಂತೆ ಒಟ್ಟು ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಹಮದಾಬಾದ್‌ನಲ್ಲಿ ವಾಸಿಸುವ ಮನ್ಸೂರ್ ಅರಬಿಯಾನಿ ಎಂಬವರು ರಾಜ್‌ಕೋಟ್‌ನ ಅಡಿಕೆ ವ್ಯಾಪಾರಿ ಮಿತೇಶ್‌ಭಾಯ್ ಹರಿಲಾಲ್ ಸಯಾನಿ (41 ವರ್ಷ) ಅವರಿಂದ ಅಡಿಕೆ ಪಡೆದಿದ್ದರು. ಹಣ ಪಾವತಿಯಾಗದ ಕಾರಣದಿಂದ  1.08 ಕೋಟಿ ರೂ. ವಂಚನೆಯ ದೂರು ದಾಖಲಾಗಿದೆ.

ಅಡಿಕೆ ಧಾರಣೆ ಏರಿಳಿತ ಹಾಗೂ ಕಳೆದ ಕೆಲವು ಸಮಯಗಳಿಂದ ವಿಪರೀತ ಏರಿಕೆಯ ಸಮಯದಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ವ್ಯವಹಾರದಲ್ಲಿ ಕೆಲವರು ನಷ್ಟ ಅನುಭವಿಸಿದ್ದರು. ಅಂದಿನಿಂದ ಅಡಿಕೆ ವಹಿವಾಟಿನಲ್ಲಿ ಕೆಲವು ವ್ಯಾಪಾರಿಗಳು ಹಳಿ ತಪ್ಪಿದ್ದರು. ಇದೀಗ ಅಡಿಕೆ ವಹಿವಾಟು ಸರಿಯಾಗಿ ನಡೆಯುತ್ತಿದ್ದರೂ ಆರ್ಥಿಕ ಮುಗ್ಗಟ್ಟು ಮುಂದುವರಿದಿದೆ. ಅಡಿಕೆ ಮಾರುಕಟ್ಟೆ ಕೂಡಾ ಚೇತರಿಕೆ ಕಾಣುತ್ತಿದೆ. ಅಡಿಕೆ ಬೆಳೆಗಾರರು ಬಿಳಿ ಚೀಟು ವಹಿವಾಟಿನಲ್ಲಿ ಎಚ್ಚರ ಇರಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

4 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

4 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

20 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago