The Rural Mirror ಕಾಳಜಿ

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ ತಿಂಗಳಲ್ಲಿ ಎರಡು ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ ಒಂದು ಪ್ರಕರಣ ನಡೆದಿದ್ದರೆ ಇನ್ನೊಂದು ಪ್ರಕರಣ ಅಹಮದಾಬಾದ್‌ನಿಂದ ವರದಿಯಾಗಿದೆ. ಅಡಿಕೆ ಬೆಳೆಗಾರರು ಇಂತಹ ಸಮಯದಲ್ಲಿ ಎಚ್ಚರ ಇರಬೇಕಾದ್ದು ಅಗತ್ಯವಾಗಿದೆ.………ಮುಂದೆ ಓದಿ……..

Advertisement
Advertisement

ಮಂಗಳೂರು ಭಗವತೀನಗರ ಮಣ್ಣಗುಡ್ಡದಲ್ಲಿ ವಾಸವಾಗಿರುವ ಕಮಲ್‌ ಕಾಂತ್‌ ಶರ್ಮಾ ಬೆಟ್ಟಂಪಾಡಿಯಲ್ಲಿ ಪಾರಸ್‌ ಟ್ರೇಡರ್ಸ್‌ ಎಂಬ ಅಡಿಕೆ ಗಾರ್ಬಲ್‌ ನಡೆಸುತ್ತಿದ್ದರು. ಅಡಿಕೆ ವ್ಯವಹಾರವನ್ನು ಛತ್ತೀಸ್‌ಗಢದ ಲಲಿತ್‌ ಜೈನ್‌ ಮತ್ತು ಪ್ರೇಕ್ಷಾ ಜೈನ್‌ ಅವರ ಮಾಲಕತ್ವದ ಕಂಪೆನಿಯೊಂದಿಗೆ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಲಲಿತ್‌ ಜೈನ್‌ ಮತ್ತು ಪ್ರೇಕ್ಷಾ ಜೈನ್‌ ಅವರು ಒಟ್ಟು ರೂ.2,76,00,300 ಬೆಲೆಯ ಅಡಿಕೆಯನ್ನು ಖರೀದಿಸಿಕೊಂಡು ಹಣವನ್ನು ನೀಡಿಲ್ಲ. ದೂರವಾಣಿ ಕರೆ ಮಾಡಿದಾಗ ಸ್ವೀಕರಿಸದೇ ಇದ್ದು, ಕೆಲವು ದಿನಗಳಿಂದ ಮೊಬೈಲ್‌ ಪೋನ್‌ ಸ್ವಿಚ್‌ ಆಪ್‌ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಾಗಿ ಕೆಲವೇ ದಿನದಲ್ಲಿ ರಾಜ್‌ಕೋಟ್ ಉದ್ಯಮಿಯಿಂದ 1.08 ಕೋಟಿ ರೂಪಾಯಿ ಪಡೆದು ವಂಚನೆ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಪ್ರಕರಣದಲ್ಲಿ
ಅಹಮದಾಬಾದ್‌ನ  ದಲ್ಲಾಳಿ ಮತ್ತು ಮೂವರು ವ್ಯಾಪಾರಿಗಳು ಸೇರಿದಂತೆ ಒಟ್ಟು ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಹಮದಾಬಾದ್‌ನಲ್ಲಿ ವಾಸಿಸುವ ಮನ್ಸೂರ್ ಅರಬಿಯಾನಿ ಎಂಬವರು ರಾಜ್‌ಕೋಟ್‌ನ ಅಡಿಕೆ ವ್ಯಾಪಾರಿ ಮಿತೇಶ್‌ಭಾಯ್ ಹರಿಲಾಲ್ ಸಯಾನಿ (41 ವರ್ಷ) ಅವರಿಂದ ಅಡಿಕೆ ಪಡೆದಿದ್ದರು. ಹಣ ಪಾವತಿಯಾಗದ ಕಾರಣದಿಂದ  1.08 ಕೋಟಿ ರೂ. ವಂಚನೆಯ ದೂರು ದಾಖಲಾಗಿದೆ.

ಅಡಿಕೆ ಧಾರಣೆ ಏರಿಳಿತ ಹಾಗೂ ಕಳೆದ ಕೆಲವು ಸಮಯಗಳಿಂದ ವಿಪರೀತ ಏರಿಕೆಯ ಸಮಯದಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ವ್ಯವಹಾರದಲ್ಲಿ ಕೆಲವರು ನಷ್ಟ ಅನುಭವಿಸಿದ್ದರು. ಅಂದಿನಿಂದ ಅಡಿಕೆ ವಹಿವಾಟಿನಲ್ಲಿ ಕೆಲವು ವ್ಯಾಪಾರಿಗಳು ಹಳಿ ತಪ್ಪಿದ್ದರು. ಇದೀಗ ಅಡಿಕೆ ವಹಿವಾಟು ಸರಿಯಾಗಿ ನಡೆಯುತ್ತಿದ್ದರೂ ಆರ್ಥಿಕ ಮುಗ್ಗಟ್ಟು ಮುಂದುವರಿದಿದೆ. ಅಡಿಕೆ ಮಾರುಕಟ್ಟೆ ಕೂಡಾ ಚೇತರಿಕೆ ಕಾಣುತ್ತಿದೆ. ಅಡಿಕೆ ಬೆಳೆಗಾರರು ಬಿಳಿ ಚೀಟು ವಹಿವಾಟಿನಲ್ಲಿ ಎಚ್ಚರ ಇರಬೇಕಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

2 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

2 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

2 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

3 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

11 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

11 hours ago