Advertisement
The Rural Mirror ಕಾಳಜಿ

ಹೆಚ್ಚುತ್ತಿರುವ ಅಡಿಕೆ ವಂಚನೆ ಪ್ರಕರಣ | ಅಡಿಕೆ ಬೆಳೆಗಾರರಲ್ಲಿ ಇರಲಿ ಎಚ್ಚರ |

Share

ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ ತಿಂಗಳಲ್ಲಿ ಎರಡು ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ ಒಂದು ಪ್ರಕರಣ ನಡೆದಿದ್ದರೆ ಇನ್ನೊಂದು ಪ್ರಕರಣ ಅಹಮದಾಬಾದ್‌ನಿಂದ ವರದಿಯಾಗಿದೆ. ಅಡಿಕೆ ಬೆಳೆಗಾರರು ಇಂತಹ ಸಮಯದಲ್ಲಿ ಎಚ್ಚರ ಇರಬೇಕಾದ್ದು ಅಗತ್ಯವಾಗಿದೆ.………ಮುಂದೆ ಓದಿ……..

ಮಂಗಳೂರು ಭಗವತೀನಗರ ಮಣ್ಣಗುಡ್ಡದಲ್ಲಿ ವಾಸವಾಗಿರುವ ಕಮಲ್‌ ಕಾಂತ್‌ ಶರ್ಮಾ ಬೆಟ್ಟಂಪಾಡಿಯಲ್ಲಿ ಪಾರಸ್‌ ಟ್ರೇಡರ್ಸ್‌ ಎಂಬ ಅಡಿಕೆ ಗಾರ್ಬಲ್‌ ನಡೆಸುತ್ತಿದ್ದರು. ಅಡಿಕೆ ವ್ಯವಹಾರವನ್ನು ಛತ್ತೀಸ್‌ಗಢದ ಲಲಿತ್‌ ಜೈನ್‌ ಮತ್ತು ಪ್ರೇಕ್ಷಾ ಜೈನ್‌ ಅವರ ಮಾಲಕತ್ವದ ಕಂಪೆನಿಯೊಂದಿಗೆ ನಡೆಸಿಕೊಂಡು ಬರುತ್ತಿದ್ದಾರೆ. ಆದರೆ ಲಲಿತ್‌ ಜೈನ್‌ ಮತ್ತು ಪ್ರೇಕ್ಷಾ ಜೈನ್‌ ಅವರು ಒಟ್ಟು ರೂ.2,76,00,300 ಬೆಲೆಯ ಅಡಿಕೆಯನ್ನು ಖರೀದಿಸಿಕೊಂಡು ಹಣವನ್ನು ನೀಡಿಲ್ಲ. ದೂರವಾಣಿ ಕರೆ ಮಾಡಿದಾಗ ಸ್ವೀಕರಿಸದೇ ಇದ್ದು, ಕೆಲವು ದಿನಗಳಿಂದ ಮೊಬೈಲ್‌ ಪೋನ್‌ ಸ್ವಿಚ್‌ ಆಪ್‌ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಾಗಿ ಕೆಲವೇ ದಿನದಲ್ಲಿ ರಾಜ್‌ಕೋಟ್ ಉದ್ಯಮಿಯಿಂದ 1.08 ಕೋಟಿ ರೂಪಾಯಿ ಪಡೆದು ವಂಚನೆ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಪ್ರಕರಣದಲ್ಲಿ
ಅಹಮದಾಬಾದ್‌ನ  ದಲ್ಲಾಳಿ ಮತ್ತು ಮೂವರು ವ್ಯಾಪಾರಿಗಳು ಸೇರಿದಂತೆ ಒಟ್ಟು ಐದು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅಹಮದಾಬಾದ್‌ನಲ್ಲಿ ವಾಸಿಸುವ ಮನ್ಸೂರ್ ಅರಬಿಯಾನಿ ಎಂಬವರು ರಾಜ್‌ಕೋಟ್‌ನ ಅಡಿಕೆ ವ್ಯಾಪಾರಿ ಮಿತೇಶ್‌ಭಾಯ್ ಹರಿಲಾಲ್ ಸಯಾನಿ (41 ವರ್ಷ) ಅವರಿಂದ ಅಡಿಕೆ ಪಡೆದಿದ್ದರು. ಹಣ ಪಾವತಿಯಾಗದ ಕಾರಣದಿಂದ  1.08 ಕೋಟಿ ರೂ. ವಂಚನೆಯ ದೂರು ದಾಖಲಾಗಿದೆ.

ಅಡಿಕೆ ಧಾರಣೆ ಏರಿಳಿತ ಹಾಗೂ ಕಳೆದ ಕೆಲವು ಸಮಯಗಳಿಂದ ವಿಪರೀತ ಏರಿಕೆಯ ಸಮಯದಲ್ಲಿ ಅಪಾರ ಪ್ರಮಾಣದಲ್ಲಿ ಅಡಿಕೆ ವ್ಯವಹಾರದಲ್ಲಿ ಕೆಲವರು ನಷ್ಟ ಅನುಭವಿಸಿದ್ದರು. ಅಂದಿನಿಂದ ಅಡಿಕೆ ವಹಿವಾಟಿನಲ್ಲಿ ಕೆಲವು ವ್ಯಾಪಾರಿಗಳು ಹಳಿ ತಪ್ಪಿದ್ದರು. ಇದೀಗ ಅಡಿಕೆ ವಹಿವಾಟು ಸರಿಯಾಗಿ ನಡೆಯುತ್ತಿದ್ದರೂ ಆರ್ಥಿಕ ಮುಗ್ಗಟ್ಟು ಮುಂದುವರಿದಿದೆ. ಅಡಿಕೆ ಮಾರುಕಟ್ಟೆ ಕೂಡಾ ಚೇತರಿಕೆ ಕಾಣುತ್ತಿದೆ. ಅಡಿಕೆ ಬೆಳೆಗಾರರು ಬಿಳಿ ಚೀಟು ವಹಿವಾಟಿನಲ್ಲಿ ಎಚ್ಚರ ಇರಬೇಕಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

36 minutes ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

56 minutes ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

1 hour ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

8 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago