#Guarantee | ಎಚ್ಚರ.. ಎಚ್ಚರ.. ಎಚ್ಚರ.. `ಗ್ಯಾರಂಟಿ’ಗಳಿಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ..? | ಸೈಬರ್ ಕಳ್ಳರಿದ್ದಾರೆ ಎಚ್ಚರ..!

June 17, 2023
10:37 AM

ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಗ್ಯಾರಂಟಿಯನ್ನು #Guarantee ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದೇ ಬಿಟ್ಟಿದೆ. ಈ ಗ್ಯಾರಂಟಿಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಬಹುತೇಕ ಮತದಾರರು ಅಧಿಕಾರಕ್ಕೆ ತಂದಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿಗಳು ಜಾರಿಗೆ ಕೂಡ ಬಂದವು. ಇದೇ ಖುಷಿಯಲ್ಲಿ ಸರ್ಕಾರ ಹೇಳಿದಂತೆ ಗ್ಯಾರಂಟಿಯ ಪ್ರಯೋಜನ ಪಡೆಯಲು ಜನರಿಗೆ ಆನ್ ಲೈನ್ ಮುಖಾಂತರ ನೋಂದಣಿ ಮಾಡಿಕೊಳ್ಳಲು ಹೇಳಿದೆ. ಆದರೆ ಫಲಾನುಭವಿಗಳು ಎಚ್ಚರ ಇರಬೇಕಾಗಿದೆ. ನಕಲಿ ಲಿಂಕ್‌ಹಾವಳಿ ಹೆಚ್ಚಾಗಿದೆ. ಈ ಹಿಂದೆಯೂ ಹಲವು ಸಂದರ್ಭ ಇದೇ ಮಾದರಿ ನಕಲಿ ಲಿಂಕ್‌ ಕೆಲಸ ಮಾಡಿತ್ತು.

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಗ್ಯಾರಂಟಿ #Guarantee ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಫಲಾನುಭವಿಗಳು ಎಚ್ಚರಿಕೆ ವಹಿಸಬೇಕು. ಯಾಕೆಂದ್ರೆ ಅರ್ಜಿ ಸಲ್ಲಿಕೆ ಮಾಡುವವರ ಮಾಹಿತಿಗೆ ಕನ್ನ ಹಾಕಲು ಸೈಬರು ಕಳ್ಳರು ಕಾಯುತ್ತಿದ್ದಾರೆ ಎನ್ನುವ ಸುದ್ದಿ ನೀಡುವ ಮೂಲಕ ಸೈಬರ್ ತಜ್ಞರು ಎಚ್ಚರಿಕೆ ರವಾನಿಸಿದ್ದಾರೆ. ಈ ಹಿಂದೆಯೂ ಉದ್ಯೋಗ ಮಾಹಿತಿ ಸೇರಿದಂತೆ ಇತರೇ ಸಂದರ್ಭದಲ್ಲಿಯೂ ಇಂತಹ ನಕಲಿ ಹಾವಳಿ ಹೆಚ್ಚಾಗಿತ್ತು.

ಗ್ಯಾರಂಟಿಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಎಚ್ಚರವಾಗಿರಿ. ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಫೇಕ್ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ. ಇದೇ ಮಾದರಿ ವ್ಯಾಟ್ಸಪ್‌, ಟೆಲಿಗ್ರಾಂ ಮೂಲಕವೂ ನಕಲಿ ಜಾಲ ಕೆಲಸ ಮಾಡುತ್ತಿದೆ.ಈ ಲಿಂಕ್ ಕ್ಲಿಕ್ ಮಾಡಿ, ಬ್ಯಾಂಕ್ ಖಾತೆ ವಿವರಗಳನ್ನು ನೀಡಿದರೆ, ಬ್ಯಾಂಕ್‌ನಲ್ಲಿರುವ ದುಡ್ಡು ಸೈಬರ್ ಚೋರರ ಪಾಲಾಗೋದು ಖಚಿತ. ಹೀಗಾಗಿ ಜನ ತುಂಬಾ ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸಿಕ್ಕ ಸಿಕ್ಕ ಲಿಂಕ್‌ಗಳಲ್ಲಿ ಸಲ್ಲಿಕೆ ಮಾಡಬಾರದು ಎನ್ನುವ ಎಚ್ಚರಿಕೆಯನ್ನು ರವಾನೆ ಮಾಡಿದ್ದಾರೆ.

ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಇಲ್ಲದೇ ಇದ್ರೆ ಜನರಿಗೆ ತೊಂದರೆಯಾಗಲಿದೆ. ಈಗಾಗಲೇ ಸಾಕಷ್ಟು ಫೇಕ್ ಲಿಂಕ್‌ಗಳ ಜಾಲ ಕೂಡ ಹರಿದಾಡುತ್ತಿದೆ ಎಂದು ಸೈಬರ್ ತಜ್ಞರಾದ ಶುಭಾ ಮಂಗಳಾ ಎಚ್ಚರಿಸಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಎಲ್ಲೆಲ್ಲಿ ಮಾಡಬಹುದು, ಯಾವ ಲಿಂಕ್‌ನಲ್ಲಿ ಮಾಡಬೇಕು ಎನ್ನುವುದನ್ನು ಸರ್ಕಾರ ಪ್ರಕಟಿಸಿದೆ. ಹೀಗಾಗಿ ಜನ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ತಜ್ಞರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror