Advertisement
ಸುದ್ದಿಗಳು

#Guarantee | ಎಚ್ಚರ.. ಎಚ್ಚರ.. ಎಚ್ಚರ.. `ಗ್ಯಾರಂಟಿ’ಗಳಿಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ..? | ಸೈಬರ್ ಕಳ್ಳರಿದ್ದಾರೆ ಎಚ್ಚರ..!

Share

ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಗ್ಯಾರಂಟಿಯನ್ನು #Guarantee ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದೇ ಬಿಟ್ಟಿದೆ. ಈ ಗ್ಯಾರಂಟಿಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಬಹುತೇಕ ಮತದಾರರು ಅಧಿಕಾರಕ್ಕೆ ತಂದಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿಗಳು ಜಾರಿಗೆ ಕೂಡ ಬಂದವು. ಇದೇ ಖುಷಿಯಲ್ಲಿ ಸರ್ಕಾರ ಹೇಳಿದಂತೆ ಗ್ಯಾರಂಟಿಯ ಪ್ರಯೋಜನ ಪಡೆಯಲು ಜನರಿಗೆ ಆನ್ ಲೈನ್ ಮುಖಾಂತರ ನೋಂದಣಿ ಮಾಡಿಕೊಳ್ಳಲು ಹೇಳಿದೆ. ಆದರೆ ಫಲಾನುಭವಿಗಳು ಎಚ್ಚರ ಇರಬೇಕಾಗಿದೆ. ನಕಲಿ ಲಿಂಕ್‌ಹಾವಳಿ ಹೆಚ್ಚಾಗಿದೆ. ಈ ಹಿಂದೆಯೂ ಹಲವು ಸಂದರ್ಭ ಇದೇ ಮಾದರಿ ನಕಲಿ ಲಿಂಕ್‌ ಕೆಲಸ ಮಾಡಿತ್ತು.

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಗ್ಯಾರಂಟಿ #Guarantee ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಫಲಾನುಭವಿಗಳು ಎಚ್ಚರಿಕೆ ವಹಿಸಬೇಕು. ಯಾಕೆಂದ್ರೆ ಅರ್ಜಿ ಸಲ್ಲಿಕೆ ಮಾಡುವವರ ಮಾಹಿತಿಗೆ ಕನ್ನ ಹಾಕಲು ಸೈಬರು ಕಳ್ಳರು ಕಾಯುತ್ತಿದ್ದಾರೆ ಎನ್ನುವ ಸುದ್ದಿ ನೀಡುವ ಮೂಲಕ ಸೈಬರ್ ತಜ್ಞರು ಎಚ್ಚರಿಕೆ ರವಾನಿಸಿದ್ದಾರೆ. ಈ ಹಿಂದೆಯೂ ಉದ್ಯೋಗ ಮಾಹಿತಿ ಸೇರಿದಂತೆ ಇತರೇ ಸಂದರ್ಭದಲ್ಲಿಯೂ ಇಂತಹ ನಕಲಿ ಹಾವಳಿ ಹೆಚ್ಚಾಗಿತ್ತು.

ಗ್ಯಾರಂಟಿಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಎಚ್ಚರವಾಗಿರಿ. ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಫೇಕ್ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ. ಇದೇ ಮಾದರಿ ವ್ಯಾಟ್ಸಪ್‌, ಟೆಲಿಗ್ರಾಂ ಮೂಲಕವೂ ನಕಲಿ ಜಾಲ ಕೆಲಸ ಮಾಡುತ್ತಿದೆ.ಈ ಲಿಂಕ್ ಕ್ಲಿಕ್ ಮಾಡಿ, ಬ್ಯಾಂಕ್ ಖಾತೆ ವಿವರಗಳನ್ನು ನೀಡಿದರೆ, ಬ್ಯಾಂಕ್‌ನಲ್ಲಿರುವ ದುಡ್ಡು ಸೈಬರ್ ಚೋರರ ಪಾಲಾಗೋದು ಖಚಿತ. ಹೀಗಾಗಿ ಜನ ತುಂಬಾ ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸಿಕ್ಕ ಸಿಕ್ಕ ಲಿಂಕ್‌ಗಳಲ್ಲಿ ಸಲ್ಲಿಕೆ ಮಾಡಬಾರದು ಎನ್ನುವ ಎಚ್ಚರಿಕೆಯನ್ನು ರವಾನೆ ಮಾಡಿದ್ದಾರೆ.

ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಇಲ್ಲದೇ ಇದ್ರೆ ಜನರಿಗೆ ತೊಂದರೆಯಾಗಲಿದೆ. ಈಗಾಗಲೇ ಸಾಕಷ್ಟು ಫೇಕ್ ಲಿಂಕ್‌ಗಳ ಜಾಲ ಕೂಡ ಹರಿದಾಡುತ್ತಿದೆ ಎಂದು ಸೈಬರ್ ತಜ್ಞರಾದ ಶುಭಾ ಮಂಗಳಾ ಎಚ್ಚರಿಸಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಎಲ್ಲೆಲ್ಲಿ ಮಾಡಬಹುದು, ಯಾವ ಲಿಂಕ್‌ನಲ್ಲಿ ಮಾಡಬೇಕು ಎನ್ನುವುದನ್ನು ಸರ್ಕಾರ ಪ್ರಕಟಿಸಿದೆ. ಹೀಗಾಗಿ ಜನ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ತಜ್ಞರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

3 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

12 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

12 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

12 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

13 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

13 hours ago