Advertisement
ಸುದ್ದಿಗಳು

#Guarantee | ಎಚ್ಚರ.. ಎಚ್ಚರ.. ಎಚ್ಚರ.. `ಗ್ಯಾರಂಟಿ’ಗಳಿಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ..? | ಸೈಬರ್ ಕಳ್ಳರಿದ್ದಾರೆ ಎಚ್ಚರ..!

Share

ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಗ್ಯಾರಂಟಿಯನ್ನು #Guarantee ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದೇ ಬಿಟ್ಟಿದೆ. ಈ ಗ್ಯಾರಂಟಿಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಬಹುತೇಕ ಮತದಾರರು ಅಧಿಕಾರಕ್ಕೆ ತಂದಿದ್ದಾರೆ. ಕೊಟ್ಟ ಭರವಸೆಯಂತೆ ಗ್ಯಾರಂಟಿಗಳು ಜಾರಿಗೆ ಕೂಡ ಬಂದವು. ಇದೇ ಖುಷಿಯಲ್ಲಿ ಸರ್ಕಾರ ಹೇಳಿದಂತೆ ಗ್ಯಾರಂಟಿಯ ಪ್ರಯೋಜನ ಪಡೆಯಲು ಜನರಿಗೆ ಆನ್ ಲೈನ್ ಮುಖಾಂತರ ನೋಂದಣಿ ಮಾಡಿಕೊಳ್ಳಲು ಹೇಳಿದೆ. ಆದರೆ ಫಲಾನುಭವಿಗಳು ಎಚ್ಚರ ಇರಬೇಕಾಗಿದೆ. ನಕಲಿ ಲಿಂಕ್‌ಹಾವಳಿ ಹೆಚ್ಚಾಗಿದೆ. ಈ ಹಿಂದೆಯೂ ಹಲವು ಸಂದರ್ಭ ಇದೇ ಮಾದರಿ ನಕಲಿ ಲಿಂಕ್‌ ಕೆಲಸ ಮಾಡಿತ್ತು.

ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಗ್ಯಾರಂಟಿ #Guarantee ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಫಲಾನುಭವಿಗಳು ಎಚ್ಚರಿಕೆ ವಹಿಸಬೇಕು. ಯಾಕೆಂದ್ರೆ ಅರ್ಜಿ ಸಲ್ಲಿಕೆ ಮಾಡುವವರ ಮಾಹಿತಿಗೆ ಕನ್ನ ಹಾಕಲು ಸೈಬರು ಕಳ್ಳರು ಕಾಯುತ್ತಿದ್ದಾರೆ ಎನ್ನುವ ಸುದ್ದಿ ನೀಡುವ ಮೂಲಕ ಸೈಬರ್ ತಜ್ಞರು ಎಚ್ಚರಿಕೆ ರವಾನಿಸಿದ್ದಾರೆ. ಈ ಹಿಂದೆಯೂ ಉದ್ಯೋಗ ಮಾಹಿತಿ ಸೇರಿದಂತೆ ಇತರೇ ಸಂದರ್ಭದಲ್ಲಿಯೂ ಇಂತಹ ನಕಲಿ ಹಾವಳಿ ಹೆಚ್ಚಾಗಿತ್ತು.

ಗ್ಯಾರಂಟಿಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಎಚ್ಚರವಾಗಿರಿ. ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಫೇಕ್ ಲಿಂಕ್‌ಗಳನ್ನು ಹರಿಯಬಿಡುತ್ತಿದ್ದಾರೆ. ಇದೇ ಮಾದರಿ ವ್ಯಾಟ್ಸಪ್‌, ಟೆಲಿಗ್ರಾಂ ಮೂಲಕವೂ ನಕಲಿ ಜಾಲ ಕೆಲಸ ಮಾಡುತ್ತಿದೆ.ಈ ಲಿಂಕ್ ಕ್ಲಿಕ್ ಮಾಡಿ, ಬ್ಯಾಂಕ್ ಖಾತೆ ವಿವರಗಳನ್ನು ನೀಡಿದರೆ, ಬ್ಯಾಂಕ್‌ನಲ್ಲಿರುವ ದುಡ್ಡು ಸೈಬರ್ ಚೋರರ ಪಾಲಾಗೋದು ಖಚಿತ. ಹೀಗಾಗಿ ಜನ ತುಂಬಾ ಎಚ್ಚರಿಕೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಸಿಕ್ಕ ಸಿಕ್ಕ ಲಿಂಕ್‌ಗಳಲ್ಲಿ ಸಲ್ಲಿಕೆ ಮಾಡಬಾರದು ಎನ್ನುವ ಎಚ್ಚರಿಕೆಯನ್ನು ರವಾನೆ ಮಾಡಿದ್ದಾರೆ.

ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಇಲ್ಲದೇ ಇದ್ರೆ ಜನರಿಗೆ ತೊಂದರೆಯಾಗಲಿದೆ. ಈಗಾಗಲೇ ಸಾಕಷ್ಟು ಫೇಕ್ ಲಿಂಕ್‌ಗಳ ಜಾಲ ಕೂಡ ಹರಿದಾಡುತ್ತಿದೆ ಎಂದು ಸೈಬರ್ ತಜ್ಞರಾದ ಶುಭಾ ಮಂಗಳಾ ಎಚ್ಚರಿಸಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಎಲ್ಲೆಲ್ಲಿ ಮಾಡಬಹುದು, ಯಾವ ಲಿಂಕ್‌ನಲ್ಲಿ ಮಾಡಬೇಕು ಎನ್ನುವುದನ್ನು ಸರ್ಕಾರ ಪ್ರಕಟಿಸಿದೆ. ಹೀಗಾಗಿ ಜನ ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ತಜ್ಞರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago