ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಇಂದಿನಿಂದ ಮೂರು ದಿನಗಳವರೆಗೆ ನೀರು ಹರಿಸಲಾಗುತ್ತಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.ಪ್ರತಿ ದಿನ 8 ಸಾವಿರ ಕ್ಯುಸೆಕ್ನಂತೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ನದಿಗೆ ಇಳಿಯಬಾರದು ಎಂದು ಸೂಚನೆ ನೀಡಿದ್ದಾರೆ. ಈ ಅವಧಿಯಲ್ಲಿ ವಿದ್ಯುತ್ ಹಾಗೂ ಡೀಸೆಲ್ ಪಂಪ್ಸೆಟ್ ಮತ್ತು ಟ್ಯಾಂಕರ್ಗಳ ಮೂಲಕ ಅನಧಿಕೃತವಾಗಿ ನದಿಯಿಂದ ನೀರು ಎತ್ತುವುದು ನಿಷೇಧಿಸಲಾಗಿದೆ. ನದಿ ಪಾತ್ರದಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…