ಶಾಲಾ ಮೇಸ್ಟ್ರಾಗಿದ್ದವರು ಭಾಗೀರಥಿ ಮುರುಳ್ಯ | ಸಾಮಾನ್ಯ ಮಹಿಳೆ ಸುಳ್ಯ ಬಿಜೆಪಿ ಅಭ್ಯರ್ಥಿ

April 12, 2023
11:18 AM

ಸುಳ್ಯ ಮೀಸಲು ಕ್ಷೇತ್ರಕ್ಕೆ ಸಾಮಾನ್ಯ ಕಾರ್ಯಕರ್ತೆಗೆ ಮಣೆ ಹಾಕಿದೆ. ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಟಿಕೆಟ್  ಘೋಷಣೆ ಮಾಡುವ ಮೂಲಕ ಪಕ್ಷವು ಹೊಸ ಭಾಷ್ಯ ಬರೆದಿದೆ.

ಭಾಗೀರಥಿ ಮುರುಳ್ಯ ಅವರು ಸುಳ್ಯದ ಮುರುಳ್ಯ ಗ್ರಾಮದ ಶಾಂತಿನಗರ ನಿವಾಸಿ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2ನೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಆದಿ ದ್ರಾವಿಡ ಸಮುದಾಯದವರು.  ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೊಳ್ತಿಗೆ ಎಂಬಲ್ಲಿ ನಾಲ್ಕು ವರ್ಷಗಳ ಕಾಲ  ಮೇಸ್ಟ್ರು ಆಗಿ ಕಾರ್ಯ ನಿರ್ವಹಿಸಿದ್ದಾರೆ. ಮಕ್ಕಳಿಗೆ ಪಾಠ ಹೇಳಿಕೊಟ್ಟ ಅನುಭವ ಅವರದು. ಬಳಿಕ ಟೈಲರಿಂಗ್ ಮತ್ತು ಹೈನುಗಾರಿಕೆಗೂ ತೊಡಗಿಸಿಕೊಂಡಿದ್ದಾರೆ.

ಸುಳ್ಯ ಬಿಜೆಪಿಯಲ್ಲಿಗುರುತಿಸಿಕೊಂಡಿರುವ ಇವರು, ಹಲವು ಸಂಘ ಸಂಸ್ಥೆಗಳ್ಲಲಿ ಉನ್ನತ ಸ್ಥಾನ ಸಮರ್ಥವಾಗಿ ನಿಭಾಯಿಸಿದವರು. ಜಿಲ್ಲಾ ಪಂಜಾಯತ್ ಸದಸ್ಯೆ ಹಾಗೂ ತಾಲೂಕು ಪಂಚಾಯತ್ ಸದಸ್ಯೆ ಆಗಿ ಕಾರ್ಯನಿರ್ವಹಿಸಿದವರು. ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾದ ಉಪಾಧ್ಯಕ್ಷೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಮತ್ತು ಕಾರ್ಯದರ್ಶಿ, ಬೆಳ್ತಂಗಡಿ ಮತ್ತು ಪುತ್ತೂರು ಬಿಜೆಪಿ ಘಟಕದ ಸಹ ಪ್ರಭಾರಿ ಆಗಿ ಕಾರ್ಯನಿರ್ವಹಿಸಿದ ಅನುಭವದ  ಇವರದು. ಈಗ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಹಾಗೂ ಕೊಡಗು ಮತ್ತು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿ ಆಗಿ ಕೂಡ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.

ಸುಳ್ಯದಲ್ಲಿ ಜಾತಿ ರಾಜಕೀಯ ಕೆಲಸ ಮಾಡುತ್ತಿದ್ದು, ಸುಳ್ಯದಲ್ಲಿ ನಿರ್ಣಾಯಕವಾಗಿರುವ ಆದಿದ್ರಾವಿಡ ಸಮುದಾಯದ ಜನರಿಗೆ 30 ವರ್ಷಗಳಿಂದ ಇಲ್ಲಿಯತನಕ ಒಮ್ಮೆಯೂ ಅವಕಾಶ ನೀಡಿಲ್ಲ. ಹೀಗಾಗಿ ಈ ಬಾರಿ ಬಿಜೆಪಿ ಆದಿದ್ರಾವಿಡ ಸಮುದಾಯಕ್ಕೆ ಟಿಕೆಟ್ ನೀಡಲೇಬೇಕು. ಒಂದು ವೇಳೆ ಟಿಕೆಟ್‌ ತಪ್ಪಿದ್ದಲ್ಲಿ ಇದರ ಪರಿಣಾಮ ಬಿಜೆಪಿ ಎದುರಿಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆದಿದ್ರಾವಿಡ ಸಂಘದ ಪ್ರಮುಖರು ಎಚ್ಚರಿಕೆ ನೀಡಿದ್ದರು.

ಆದಿದ್ರಾವಿಡ ಸಮುದಾಯಕ್ಕೆ ಟಿಕೆಟ್ ನೀಡಿದರೇ ಪಕ್ಷಾತೀತವಾಗಿ ನಮ್ಮ ಸಮುದಾಯದ ಮತವನ್ನು ವರ್ಗೀಕರಣ ಆಗದಂತೆ ನೋಡಿಕೊಳ್ಳುವುದಾಗಿಯೂ ಸಮುದಾಯದವರು ಘಂಟಾಘೋಷವಾಗಿ ಹೇಳಿಕೊಂಡಿದ್ದರು. ಅಂದುಕೊಂಡತೆ ಭಾಗೀರಥಿ ಅವರಿಗೆ ಟಿಕೆಟ್ ನೀಡಿರುವುದು ಈ ಸಮುದಾಯಕ್ಕೆ ಖುಷಿ ತಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror