Advertisement
ಸುದ್ದಿಗಳು

ಶಾಲಾ ಮೇಸ್ಟ್ರಾಗಿದ್ದವರು ಭಾಗೀರಥಿ ಮುರುಳ್ಯ | ಸಾಮಾನ್ಯ ಮಹಿಳೆ ಸುಳ್ಯ ಬಿಜೆಪಿ ಅಭ್ಯರ್ಥಿ

Share

ಸುಳ್ಯ ಮೀಸಲು ಕ್ಷೇತ್ರಕ್ಕೆ ಸಾಮಾನ್ಯ ಕಾರ್ಯಕರ್ತೆಗೆ ಮಣೆ ಹಾಕಿದೆ. ಭಾಗೀರಥಿ ಮುರುಳ್ಯ ಅವರಿಗೆ ಬಿಜೆಪಿ ಟಿಕೆಟ್  ಘೋಷಣೆ ಮಾಡುವ ಮೂಲಕ ಪಕ್ಷವು ಹೊಸ ಭಾಷ್ಯ ಬರೆದಿದೆ.

Advertisement
Advertisement

ಭಾಗೀರಥಿ ಮುರುಳ್ಯ ಅವರು ಸುಳ್ಯದ ಮುರುಳ್ಯ ಗ್ರಾಮದ ಶಾಂತಿನಗರ ನಿವಾಸಿ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2ನೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಆದಿ ದ್ರಾವಿಡ ಸಮುದಾಯದವರು.  ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೊಳ್ತಿಗೆ ಎಂಬಲ್ಲಿ ನಾಲ್ಕು ವರ್ಷಗಳ ಕಾಲ  ಮೇಸ್ಟ್ರು ಆಗಿ ಕಾರ್ಯ ನಿರ್ವಹಿಸಿದ್ದಾರೆ. ಮಕ್ಕಳಿಗೆ ಪಾಠ ಹೇಳಿಕೊಟ್ಟ ಅನುಭವ ಅವರದು. ಬಳಿಕ ಟೈಲರಿಂಗ್ ಮತ್ತು ಹೈನುಗಾರಿಕೆಗೂ ತೊಡಗಿಸಿಕೊಂಡಿದ್ದಾರೆ.

Advertisement

ಸುಳ್ಯ ಬಿಜೆಪಿಯಲ್ಲಿಗುರುತಿಸಿಕೊಂಡಿರುವ ಇವರು, ಹಲವು ಸಂಘ ಸಂಸ್ಥೆಗಳ್ಲಲಿ ಉನ್ನತ ಸ್ಥಾನ ಸಮರ್ಥವಾಗಿ ನಿಭಾಯಿಸಿದವರು. ಜಿಲ್ಲಾ ಪಂಜಾಯತ್ ಸದಸ್ಯೆ ಹಾಗೂ ತಾಲೂಕು ಪಂಚಾಯತ್ ಸದಸ್ಯೆ ಆಗಿ ಕಾರ್ಯನಿರ್ವಹಿಸಿದವರು. ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾದ ಉಪಾಧ್ಯಕ್ಷೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ಮತ್ತು ಕಾರ್ಯದರ್ಶಿ, ಬೆಳ್ತಂಗಡಿ ಮತ್ತು ಪುತ್ತೂರು ಬಿಜೆಪಿ ಘಟಕದ ಸಹ ಪ್ರಭಾರಿ ಆಗಿ ಕಾರ್ಯನಿರ್ವಹಿಸಿದ ಅನುಭವದ  ಇವರದು. ಈಗ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಹಾಗೂ ಕೊಡಗು ಮತ್ತು ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಪ್ರಭಾರಿ ಆಗಿ ಕೂಡ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.

ಸುಳ್ಯದಲ್ಲಿ ಜಾತಿ ರಾಜಕೀಯ ಕೆಲಸ ಮಾಡುತ್ತಿದ್ದು, ಸುಳ್ಯದಲ್ಲಿ ನಿರ್ಣಾಯಕವಾಗಿರುವ ಆದಿದ್ರಾವಿಡ ಸಮುದಾಯದ ಜನರಿಗೆ 30 ವರ್ಷಗಳಿಂದ ಇಲ್ಲಿಯತನಕ ಒಮ್ಮೆಯೂ ಅವಕಾಶ ನೀಡಿಲ್ಲ. ಹೀಗಾಗಿ ಈ ಬಾರಿ ಬಿಜೆಪಿ ಆದಿದ್ರಾವಿಡ ಸಮುದಾಯಕ್ಕೆ ಟಿಕೆಟ್ ನೀಡಲೇಬೇಕು. ಒಂದು ವೇಳೆ ಟಿಕೆಟ್‌ ತಪ್ಪಿದ್ದಲ್ಲಿ ಇದರ ಪರಿಣಾಮ ಬಿಜೆಪಿ ಎದುರಿಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆದಿದ್ರಾವಿಡ ಸಂಘದ ಪ್ರಮುಖರು ಎಚ್ಚರಿಕೆ ನೀಡಿದ್ದರು.

Advertisement

ಆದಿದ್ರಾವಿಡ ಸಮುದಾಯಕ್ಕೆ ಟಿಕೆಟ್ ನೀಡಿದರೇ ಪಕ್ಷಾತೀತವಾಗಿ ನಮ್ಮ ಸಮುದಾಯದ ಮತವನ್ನು ವರ್ಗೀಕರಣ ಆಗದಂತೆ ನೋಡಿಕೊಳ್ಳುವುದಾಗಿಯೂ ಸಮುದಾಯದವರು ಘಂಟಾಘೋಷವಾಗಿ ಹೇಳಿಕೊಂಡಿದ್ದರು. ಅಂದುಕೊಂಡತೆ ಭಾಗೀರಥಿ ಅವರಿಗೆ ಟಿಕೆಟ್ ನೀಡಿರುವುದು ಈ ಸಮುದಾಯಕ್ಕೆ ಖುಷಿ ತಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

18 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

20 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago