ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಿಎಂ ಭೇಟಿಯ ವೇಳೆ ಗೈರಾದ ಶಾಸಕ ಅಂಗಾರ | ಸಿಎಂ ಭೇಟಿಯಾದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ | ಅಂಗಾರ ಅವರ ಪರವಾಗಿ ನಿಂತವರು ಒಬ್ಬರು….! |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಆಗಮಿಸುವ ವೇಳೆ ಶಾಸಕ ಎಸ್‌ ಅಂಗಾರ ಗೈರಾಗಿದ್ದಾರೆ. ಈ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಈ ಸಂದರ್ಭ ಸುಳ್ಯದ ಬಿಜೆಪಿ ಪ್ರಮುಖರು ಇದ್ದರು.

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆಯಾಗಿದ್ದು ಅಂಗಾರ ಬದಲಾಗಿ ಭಾಗೀರಥಿ ಮುರುಳ್ಯ ಹೆಸರು ಘೋಷಣೆಯಾಗಿದೆ. ತಕ್ಷಣವೇ ಶಾಸಕ, ಸಚಿವ ಅಂಗಾರ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದರು, ಪಕ್ಷದ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಚ್ಚರಿ ಎಂದರೆ ಸುಮಾರು 30 ವರ್ಷಗಳ ಕಾಲ ಶಾಸಕರಾಗಿದ್ದ ಅಂಗಾರ ಅವರ ಬದಲಾಯಿಸಿದಾಗ ಅವರಿಗೆ ಅಸಮಾಧಾನವಾಗುವುದು ಸಹಜವೇ. ಆದರೆ ಅದೇ ಪಕ್ಷದ ಪ್ರಮುಖರು, ಅಂಗಾರ ಅವರ ಜೊತೆಗೇ ಇದ್ದವರು ಮೌನವಹಿಸಿದ್ದರು. ಒಬ್ಬರು ಮಾತ್ರಾ ಅಸಮಾಧಾನ ವ್ಯಕ್ತಪಡಿಸಿ, ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು  ಪಕ್ಷದ ಹುದ್ದೆಗೆ ರಾಜೀನಾಮೆ ಘೋಷಿಸಿದರು. ಪಕ್ಷದ ಉಳಿದವರು ಅಂಗಾರ ಅವರ ಬಳಿ ಸುಳಿಯಲಿಲ್ಲ ಎನ್ನುವುದು ಅಂಗಾರ ಅವರ ಆಪ್ತ ವಲಯ ಹೇಳಿಕೊಂಡಿದೆ.

ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಕ್ಕೆ ಸುಬ್ರಹ್ಮಣ್ಯ ಭೇಟಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಅವಕಾಶವನ್ನು ಬಿಜೆಪಿ ಅಭ್ಯರ್ಥಿ ಭಾಗೀರಥಿ ಬಳಸಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಪರಿಚಯಿಸಿಕೊಂಡು, ಸ್ವಾಗತಿಸಿ ಆಶೀರ್ವಾದ ಪಡೆದರು. ಈ ಸಂದರ್ಭ ಸುಳ್ಯದ ಬಿಜೆಪಿಯ ಎಲ್ಲಾ ಪ್ರಮುಖರೂ ಭಾಗಿಯಾಗಿದ್ದರು. ಈ ಮೂಲಕ ಅಂಗಾರ ಅವರಿಗೆ ಟಿಕೆಟ್‌ ತಪ್ಪಿದರೂ ಪಕ್ಷದ ನಿಲುವು ಸರಿಯಾಗಿದೆ ಎನ್ನುವ ಸಂದೇಶವನ್ನು ರವಾನಿಸಿದರು.

ಈ ಮಧ್ಯೆ ಬಿಜೆಪಿ ಪಕ್ಷವು ಅಭ್ಯರ್ಥಿ ಬದಲಾವಣೆ ಮಾಡಿರುವುದನ್ನು ಬಿಜೆಪಿ ಮುಖಂಡ ಎಸ್‌ ಎನ್‌ ಮನ್ಮಥ ಸ್ವಾಗತಿಸಿದ್ದಾರೆ. ಈ ಮೂಲಕ ಬಿಜೆಪಿ ಸ್ವಾಭಿಮಾನಿ ಬಳಗ ಎನ್ನುವ ಬಿಜೆಪಿ ಗುಂಪು ಕೂಡಾ ಅಭ್ಯರ್ಥಿ ಬದಲಾವಣೆಯನ್ನು ಸ್ವಾಗತಿಸಿದೆ ಎನ್ನುವುದು  ಪರೋಕ್ಷವಾದ ಸೂಚನೆಯನ್ನೂ ನೀಡಿದೆ.ಇದೆಲ್ಲಾ ಬೆಳವಣಿಗೆಯು ಸುಳ್ಯ ಬಿಜೆಪಿಯಲ್ಲಿ ಟಿಕೆಟ್‌ ಘೋಷಣೆಯ ಬಳಿಕ ನಡೆದಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…

3 hours ago

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

6 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

6 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

6 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

7 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

7 hours ago