Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಿಎಂ ಭೇಟಿಯ ವೇಳೆ ಗೈರಾದ ಶಾಸಕ ಅಂಗಾರ | ಸಿಎಂ ಭೇಟಿಯಾದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ | ಅಂಗಾರ ಅವರ ಪರವಾಗಿ ನಿಂತವರು ಒಬ್ಬರು….! |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಆಗಮಿಸುವ ವೇಳೆ ಶಾಸಕ ಎಸ್‌ ಅಂಗಾರ ಗೈರಾಗಿದ್ದಾರೆ. ಈ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಈ ಸಂದರ್ಭ ಸುಳ್ಯದ ಬಿಜೆಪಿ ಪ್ರಮುಖರು ಇದ್ದರು.

Advertisement
Advertisement

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆಯಾಗಿದ್ದು ಅಂಗಾರ ಬದಲಾಗಿ ಭಾಗೀರಥಿ ಮುರುಳ್ಯ ಹೆಸರು ಘೋಷಣೆಯಾಗಿದೆ. ತಕ್ಷಣವೇ ಶಾಸಕ, ಸಚಿವ ಅಂಗಾರ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದರು, ಪಕ್ಷದ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement

ಅಚ್ಚರಿ ಎಂದರೆ ಸುಮಾರು 30 ವರ್ಷಗಳ ಕಾಲ ಶಾಸಕರಾಗಿದ್ದ ಅಂಗಾರ ಅವರ ಬದಲಾಯಿಸಿದಾಗ ಅವರಿಗೆ ಅಸಮಾಧಾನವಾಗುವುದು ಸಹಜವೇ. ಆದರೆ ಅದೇ ಪಕ್ಷದ ಪ್ರಮುಖರು, ಅಂಗಾರ ಅವರ ಜೊತೆಗೇ ಇದ್ದವರು ಮೌನವಹಿಸಿದ್ದರು. ಒಬ್ಬರು ಮಾತ್ರಾ ಅಸಮಾಧಾನ ವ್ಯಕ್ತಪಡಿಸಿ, ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು  ಪಕ್ಷದ ಹುದ್ದೆಗೆ ರಾಜೀನಾಮೆ ಘೋಷಿಸಿದರು. ಪಕ್ಷದ ಉಳಿದವರು ಅಂಗಾರ ಅವರ ಬಳಿ ಸುಳಿಯಲಿಲ್ಲ ಎನ್ನುವುದು ಅಂಗಾರ ಅವರ ಆಪ್ತ ವಲಯ ಹೇಳಿಕೊಂಡಿದೆ.

Advertisement

ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಕ್ಕೆ ಸುಬ್ರಹ್ಮಣ್ಯ ಭೇಟಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಅವಕಾಶವನ್ನು ಬಿಜೆಪಿ ಅಭ್ಯರ್ಥಿ ಭಾಗೀರಥಿ ಬಳಸಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಪರಿಚಯಿಸಿಕೊಂಡು, ಸ್ವಾಗತಿಸಿ ಆಶೀರ್ವಾದ ಪಡೆದರು. ಈ ಸಂದರ್ಭ ಸುಳ್ಯದ ಬಿಜೆಪಿಯ ಎಲ್ಲಾ ಪ್ರಮುಖರೂ ಭಾಗಿಯಾಗಿದ್ದರು. ಈ ಮೂಲಕ ಅಂಗಾರ ಅವರಿಗೆ ಟಿಕೆಟ್‌ ತಪ್ಪಿದರೂ ಪಕ್ಷದ ನಿಲುವು ಸರಿಯಾಗಿದೆ ಎನ್ನುವ ಸಂದೇಶವನ್ನು ರವಾನಿಸಿದರು.

ಈ ಮಧ್ಯೆ ಬಿಜೆಪಿ ಪಕ್ಷವು ಅಭ್ಯರ್ಥಿ ಬದಲಾವಣೆ ಮಾಡಿರುವುದನ್ನು ಬಿಜೆಪಿ ಮುಖಂಡ ಎಸ್‌ ಎನ್‌ ಮನ್ಮಥ ಸ್ವಾಗತಿಸಿದ್ದಾರೆ. ಈ ಮೂಲಕ ಬಿಜೆಪಿ ಸ್ವಾಭಿಮಾನಿ ಬಳಗ ಎನ್ನುವ ಬಿಜೆಪಿ ಗುಂಪು ಕೂಡಾ ಅಭ್ಯರ್ಥಿ ಬದಲಾವಣೆಯನ್ನು ಸ್ವಾಗತಿಸಿದೆ ಎನ್ನುವುದು  ಪರೋಕ್ಷವಾದ ಸೂಚನೆಯನ್ನೂ ನೀಡಿದೆ.ಇದೆಲ್ಲಾ ಬೆಳವಣಿಗೆಯು ಸುಳ್ಯ ಬಿಜೆಪಿಯಲ್ಲಿ ಟಿಕೆಟ್‌ ಘೋಷಣೆಯ ಬಳಿಕ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಳಿವಿನಂಚಿಗೆ ಸಾಗುತ್ತಿದೆಯಾ ಭೂಮಿ? : ಕಾದು ಕೆಂಡದಂತಾದ ಧರಣಿಗೆ ‘ರೆಡ್‌ ಅಲರ್ಟ್‌’: ಹವಾಮಾನ ತಜ್ಞರ ಎಚ್ಚರಿಕೆ..!

ಮನುಷ್ಯ(Human) ಬದುಕಬೇಕಾದರೆ ಭೂಮಿ(Earth) ಬೇಕೇ ಬೇಕು. ಅದು ಇಲ್ಲ ಎಂದರೆ ಮನುಷ್ಯನ ಜೀವನ…

2 mins ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

2 hours ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

4 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

4 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

21 hours ago