Advertisement
ಸುದ್ದಿಗಳು

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಿಎಂ ಭೇಟಿಯ ವೇಳೆ ಗೈರಾದ ಶಾಸಕ ಅಂಗಾರ | ಸಿಎಂ ಭೇಟಿಯಾದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ | ಅಂಗಾರ ಅವರ ಪರವಾಗಿ ನಿಂತವರು ಒಬ್ಬರು….! |

Share

ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಆಗಮಿಸುವ ವೇಳೆ ಶಾಸಕ ಎಸ್‌ ಅಂಗಾರ ಗೈರಾಗಿದ್ದಾರೆ. ಈ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಈ ಸಂದರ್ಭ ಸುಳ್ಯದ ಬಿಜೆಪಿ ಪ್ರಮುಖರು ಇದ್ದರು.

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾವಣೆಯಾಗಿದ್ದು ಅಂಗಾರ ಬದಲಾಗಿ ಭಾಗೀರಥಿ ಮುರುಳ್ಯ ಹೆಸರು ಘೋಷಣೆಯಾಗಿದೆ. ತಕ್ಷಣವೇ ಶಾಸಕ, ಸಚಿವ ಅಂಗಾರ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜಕೀಯ ನಿವೃತ್ತಿ ಘೋಷಿಸಿದರು, ಪಕ್ಷದ ನಡೆಸಿಕೊಂಡ ರೀತಿ ಸರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಚ್ಚರಿ ಎಂದರೆ ಸುಮಾರು 30 ವರ್ಷಗಳ ಕಾಲ ಶಾಸಕರಾಗಿದ್ದ ಅಂಗಾರ ಅವರ ಬದಲಾಯಿಸಿದಾಗ ಅವರಿಗೆ ಅಸಮಾಧಾನವಾಗುವುದು ಸಹಜವೇ. ಆದರೆ ಅದೇ ಪಕ್ಷದ ಪ್ರಮುಖರು, ಅಂಗಾರ ಅವರ ಜೊತೆಗೇ ಇದ್ದವರು ಮೌನವಹಿಸಿದ್ದರು. ಒಬ್ಬರು ಮಾತ್ರಾ ಅಸಮಾಧಾನ ವ್ಯಕ್ತಪಡಿಸಿ, ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು  ಪಕ್ಷದ ಹುದ್ದೆಗೆ ರಾಜೀನಾಮೆ ಘೋಷಿಸಿದರು. ಪಕ್ಷದ ಉಳಿದವರು ಅಂಗಾರ ಅವರ ಬಳಿ ಸುಳಿಯಲಿಲ್ಲ ಎನ್ನುವುದು ಅಂಗಾರ ಅವರ ಆಪ್ತ ವಲಯ ಹೇಳಿಕೊಂಡಿದೆ.

ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಕ್ಕೆ ಸುಬ್ರಹ್ಮಣ್ಯ ಭೇಟಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಅವಕಾಶವನ್ನು ಬಿಜೆಪಿ ಅಭ್ಯರ್ಥಿ ಭಾಗೀರಥಿ ಬಳಸಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಪರಿಚಯಿಸಿಕೊಂಡು, ಸ್ವಾಗತಿಸಿ ಆಶೀರ್ವಾದ ಪಡೆದರು. ಈ ಸಂದರ್ಭ ಸುಳ್ಯದ ಬಿಜೆಪಿಯ ಎಲ್ಲಾ ಪ್ರಮುಖರೂ ಭಾಗಿಯಾಗಿದ್ದರು. ಈ ಮೂಲಕ ಅಂಗಾರ ಅವರಿಗೆ ಟಿಕೆಟ್‌ ತಪ್ಪಿದರೂ ಪಕ್ಷದ ನಿಲುವು ಸರಿಯಾಗಿದೆ ಎನ್ನುವ ಸಂದೇಶವನ್ನು ರವಾನಿಸಿದರು.

ಈ ಮಧ್ಯೆ ಬಿಜೆಪಿ ಪಕ್ಷವು ಅಭ್ಯರ್ಥಿ ಬದಲಾವಣೆ ಮಾಡಿರುವುದನ್ನು ಬಿಜೆಪಿ ಮುಖಂಡ ಎಸ್‌ ಎನ್‌ ಮನ್ಮಥ ಸ್ವಾಗತಿಸಿದ್ದಾರೆ. ಈ ಮೂಲಕ ಬಿಜೆಪಿ ಸ್ವಾಭಿಮಾನಿ ಬಳಗ ಎನ್ನುವ ಬಿಜೆಪಿ ಗುಂಪು ಕೂಡಾ ಅಭ್ಯರ್ಥಿ ಬದಲಾವಣೆಯನ್ನು ಸ್ವಾಗತಿಸಿದೆ ಎನ್ನುವುದು  ಪರೋಕ್ಷವಾದ ಸೂಚನೆಯನ್ನೂ ನೀಡಿದೆ.ಇದೆಲ್ಲಾ ಬೆಳವಣಿಗೆಯು ಸುಳ್ಯ ಬಿಜೆಪಿಯಲ್ಲಿ ಟಿಕೆಟ್‌ ಘೋಷಣೆಯ ಬಳಿಕ ನಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

14 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

21 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago