#GruhaJyothi |ಎಲ್ಲಾ “ಜ್ಯೋತಿ”ಗಳು ಇನ್ನು ಮುಂದೆ “ಗೃಹಜ್ಯೋತಿ” ಜೊತೆ ವಿಲೀನ |

June 26, 2023
1:36 PM

ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಈ ಹಿಂದೆ ಬಡವರಿಗಾಗಿ ಅನೇಕ ಯೋಜನೆಗಳನ್ನು ಹಿಂದಿನ ಸರ್ಕಾರಗಗಳು ಜಾರಿಗೆ ತಂದಿದ್ದವು. ಈಗ ಅವೆಲ್ಲವನ್ನು ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ #GruhaJyothi ಜೊತೆಗೆ ವಿಲೀನಗೊಳಿಸಲು ಮುಂದಾಗಿದೆ.

ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಫಲಾನುಭವಿಗಳು ಗೃಹಜ್ಯೋತಿ ಗೆ ನೋಂದಾಯಿಸಿಕೊಳ್ಳಲು ಎಸ್ಕಾಂ #ESCOM ಗಳು ಮನವಿ ಮಾಡಿಕೊಂಡಿವೆ. ಭಾಗ್ಯಜ್ಯೋತಿ ಕುಟೀರ ಜ್ಯೋತಿಯಲ್ಲಿ 40 ಯೂನಿಟ್ ಹಾಗೂ ಅಮೃತ ಜ್ಯೋತಿಯಲ್ಲಿ ಎಸ್‌ಟಿ, ಎಸ್‌ಸಿ ಸಮುದಾಯಕ್ಕೆ 75 ಯೂನಿಟ್ ಉಚಿತ ಸ್ಕೀಮ್ ಇತ್ತು. ಈಗ ಈ ಎಲ್ಲಾ ಯೋಜನೆಗಳು ಗೃಹಜ್ಯೋತಿಯ ಜೊತೆಗೆ ವಿಲೀನಗೊಂಡಿದೆ.

ಬೇರೆ ಸ್ಕೀಮ್‌ಗಳ ಪ್ರಯೋಜನವನ್ನು ಪಡೆಯುತ್ತಿರುವ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಮತ್ತೊಮ್ಮೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳುವಂತೆ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ ಜೊತೆಗೆ ವಿಲೀನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror