ಭಜನಾ ಕಮ್ಮಟದ ರಜತ ಮಹೋತ್ಸವ ಸಂಭ್ರಮ | ದೇವರನ್ನು ಭೇಟಿ ಮಾಡಲು ಸುಲಭದ ಮಾರ್ಗ ಭಜನೆ – ಎಡನೀರು ಶ್ರೀ |

September 30, 2023
6:14 PM
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 25ನೇ ವರ್ಷದ ಭಜನಾ ಕಮ್ಮಟದ ಮೂರನೇ ದಿನದ ಕಾರ್ಯಕ್ರಮಕ್ಕೆ ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಇವರು ಭೇಟಿ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 25ನೇ ವರ್ಷದ ಭಜನಾ ಕಮ್ಮಟದ ಮೂರನೇ ದಿನದ ಕಾರ್ಯಕ್ರಮಕ್ಕೆ ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಇವರು ಭೇಟಿ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಭಜನಾ ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಭಜನೆಯು ವಿಭಜಿಸುವುದಿಲ್ಲ. ಬದಲಾಗಿ ಒಗ್ಗೂಡಿಸುತ್ತದೆ. ‘ದೇವರನ್ನು ಭೇಟಿ ಮಾಡಲು ಸುಲಭದ ಮಾರ್ಗ ಭಜನೆಯಾಗಿದೆ’ ಯಾರು ಸಮಾಜವನ್ನು ವಿಭಜಿಸುವ ಕಾರ್ಯಕ್ಕೆ ಯಾರು ಭಾಗಿಯಾಗುತ್ತಾರೋ ಅದು ಅಧರ್ಮದ ಅಪ್ರಕ್ರಿಯೆ. ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಗುತ್ತಿದೆ. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಧಾರ್ಮಿಕ ಸಂಘಟನೆ, ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳ ಮೂಲಕ ಎಲ್ಲರ ಅಭಿವೃದ್ಢಿಗೆ ಕೈ ಜೋಡಿಸುತ್ತಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದ ರಜತ ಮಹೋತ್ಸವದ ಮೂರನೇ ದಿನ ಡಾ|.ಐ ಶಶಿಕಾಂತ್ ಜೈನ್ ಯೋಗ ನಿರ್ದೇಶಕರು ಶಾಂತಿವನ ಟ್ರಸ್ಟ್ ಇವರು ಮುಂಜಾನೆ ಶಿಬಿರಾರ್ಥಿಗಳಿಗೆ ಯೋಗ ಅಭ್ಯಾಸವನ್ನು ಮಾಡಿಸಿದರು.

ಇಂದಿನ ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯದ ಪ್ರತಿಷ್ಠಿತ ಭಜನಾ ಕಲಾವಿದರಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಅವರು ಭಜನಾ ತರಬೇತಿಯನ್ನು ನಡೆಸಿಕೊಟ್ಟರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror