ಧರ್ಮಸ್ಥಳದಲ್ಲಿ 25 ನೆ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅಕ್ಟೋಬರ್ 4 ರ ವರೆಗೆ ನಡೆಯಲಿದೆ.
ನಾಳೆ ಗುರುವಾರ ಪೂರ್ವಾಹ್ನ 11 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು.ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.
ಕಾರ್ಯಾಗಾರದಲ್ಲಿ ಖ್ಯಾತ ಗಾಯಕರಾದ ಬೆಂಗಳೂರಿನ ಶಂಕರ್ ಶ್ಯಾನ್ಬಾಗ್ ಮತ್ತು ಎಂ.ಎಸ್. ಗಿರಿಧರ್, ಕಾಸರಗೋಡಿನ ರಾಮಕೃಷ್ಣ ಕಾಟುಕುಕ್ಕೆ, ಮಣಿಪಾಲದ ಉಷಾ ಹೆಬ್ಬಾರ್, ಉಡುಪಿಯ ಸಂಗೀತಾ ಬಾಲಚಂದ್ರ, ಧರ್ಮಸ್ಥಳದ ಮನೋರಮಾ ತೋಳ್ಪಾಡಿತ್ತಾಯ, ಸುನಿಲ್ ಶೆಟ್ಟಿ, ಸೌಮ್ಯ ಸುಭಾಷ್, ಮಂಗಲದಾಸ ಗುಲ್ವಾಡಿ, ಎಂ. ನಾಗೇಶ್ ಶೆಣೈ, ರವಿರಾಜ್ ಉಜಿರೆ, ರಮೇಶ್ ಕಲ್ಮಾಡಿ, ಶಂಕರ್ ಉಡುಪಿ, ಕುಮಾರಿ ಚೈತ್ರಾ ಮತ್ತು ಕುಮಾರಿ ಮಾಧವಿ, ಎಂ.ಎಸ್. ಹಾಗೂ ಡಾ. ಶಶಿಕಾಂತ್ ಜೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…