ವಿಶೇಷ ವರದಿಗಳು

65 ವರ್ಷಗಳಿಂದ ಜನರನ್ನು ಒಂದಾಗಿಸುತ್ತಿರುವ “ಭಜನೆ ” | ಕೊಕ್ಕಡದಲ್ಲೊಂದು ಸಂಭ್ರಮದ ಉತ್ಸವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒಂದೆರಡಲ್ಲ…! ಬರೋಬ್ಬರಿ 65 ವರ್ಷಗಳಿಂದ ಭಜನೆ ನಡೆಯುತ್ತಿದೆ ಇಲ್ಲಿ..!, ಈ ಮೂಲಕ ಜನರು ಒಂದಾಗುತ್ತಿದ್ದಾರೆ. ಜಾತಿಯ ಬೇಧವಿಲ್ಲದೆ ಒಂದಾಗಿಸುವ ಈ ಭಜನೆ ಇಲ್ಲಿ ಒಂದು ಉತ್ಸವ..!. ಇಂತಹ ಸಂಭ್ರಮ ನಡೆಯುತ್ತಿರುವುದು ಕೊಕ್ಕಡದಲ್ಲಿ.

Advertisement

ವಿಶ್ವ ಹಿಂದೂ ಪರಿಷದ್ ಕೊಕ್ಕಡ ಮತ್ತು ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ವತಿಯಿಂದ ನಡೆಯುತ್ತಿರುವ 65ನೇ ವರ್ಷದ ಸಾರ್ವಜನಿಕ ಭಜನಾ ಸಂಕೀರ್ತನೆ ನಡೆಯಿತು. ಸುಮಾರು 65 ವರ್ಷಗಳ ಹಿಂದೆ ಆರಂಭವಾದ ಈ ನಗರ ಭಜನೆಯು ಕೊಕ್ಕಡದ ಒಂದು ದೊಡ್ಡ ಉತ್ಸವ.

ಸುಮಾರು 60 ರ ದಶಕದಲ್ಲಿ, ಕೊಕ್ಕಡದಲ್ಲಿ ಹಿಂದೂ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಶಿಶಿಲದ ಬರ್ಗುಲ ನಿವಾಸಿ ದಿವಂಗತ ಪುರುಷೋತ್ತಮ ನಾಯಕ್ ಅವರ ಮುಂದಾಳತ್ವದಲ್ಲಿ ಹುಟ್ಟಿಕೊಂಡ ನಗರ ಭಜನೆಯೂ ಇವರ ಸಮಕಾಲೀನರ ಉತ್ಸಾಹದೊಂದಿಗೆ ಇದೀಗ ಭಜನಾ ಸಪ್ತಾಹದ ಮೂಲಕ ಮುಂದುವರೆದುಕೊಂಡು ಬಂದಿದೆ.

Advertisement

ದೀಪಾವಳಿ ನಂತರದ ಮೊದಲ ಷಷ್ಠಿಯಂದು ಸಂಜೆ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವರಿಗೆ ರಂಗಪೂಜೆ ಯನ್ನು ಅರ್ಪಿಸಿ ಭಜನೆ ಆರಂಭಗೊಳ್ಳುತ್ತದೆ. ಬಳಿಕ ಎರಡನೆಯ ದಿನ ಸಂಜೆ ಶಿಶಿಲದ ಬರ್ಗುಲದಲ್ಲಿರುವ ದಿವಂಗತ ಪುರುಷೋತ್ತಮ ನಾಯಕರ ಮನೆಯಲ್ಲಿರುವ ರಾಮ ಸೀತೆ ಲಕ್ಷ್ಮಣ ಮತ್ತು ಹನುಮಂತರ ಬೆಳ್ಳಿಯ ಭಾವಚಿತ್ರದೊಂದಿಗೆ ಮನೆಯಿಂದ ಕೊಕ್ಕಡದವರೆಗೆ ಶೋಭ ಯಾತ್ರೆಯ ಮೂಲಕ ವೈಭವಪೂರಿತವಾಗಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ಪ್ರವೇಶಿಸುತ್ತದೆ.

ಪ್ರಾರ್ಥನೆಯ ಬಳಿಕ ಅಲ್ಲಿ ಭಜನೆಗಳನ್ನು ನಡೆಸಿ ಬೆಳ್ಳಿಯ ರಥದಲ್ಲಿ ದೇವರು ಸಮೇತ ಅಶ್ವತ್ಥಕಟ್ಟೆ ವರೆಗೆ ಕುಣಿತ ಭಜನೆಯ ಮೂಲಕ ಸಾಗಿ ಬಳಿಕ ಅಲ್ಲಿ ಪೂಜೆ ನೆರವೇರಿಸಿ ಕಾರ್ತಿಕ ಕಟ್ಟೆಯವರೆಗೆ ಭಜನೆಯು ಸಾಗುತ್ತದೆ. ನಂತರ ಅಲ್ಲಿಂದ ಹರಿಹರ ಕಟ್ಟೆಗೆ ಭಜನಾರ್ಥಿಗಳು ಸಾಗಿ ಮತ್ತೆ ಭಜನಾ ಮಂದಿರಕ್ಕೆ ಬಂದು ಅಲ್ಲಿ ದೇವರನ್ನು ಇರಿಸಿ, ದೇವರ ಸುತ್ತಲೂ ಕುಣಿತ ಭಜನೆ ಯನ್ನು ಆರಂಭಿಸುತ್ತಾರೆ. ಹೀಗೆ ಸುಮಾರು 3 ಗಂಟೆಗಳಿಗಿಂತ ಹೆಚ್ಚು ಕಾಲ ಭಜನೆ ಮುಂದುವರೆಯುತ್ತದೆ.

Koo App

#ಭಜನೆ
ಕೊಕ್ಕಡದಲ್ಲಿ ನಡೆದ ನಗರ ಭಜನಾ‌ ಸಂಕೀರ್ತನೆ

The Rural Mirror (@ruralmirror) 17 Nov 2021

Advertisement

ವಾರಗಳ ಕಾಲ ನಡೆಯುವ ಭಜನಾ ಸಂಕೀರ್ತನೆಯಲ್ಲಿ ಪ್ರತಿನಿತ್ಯ ಇನ್ನೂರರಿಂದ ಮುನ್ನೂರು ಜನರು ಭಾಗವಹಿಸುತ್ತಾರೆ. ಈ ಭಜನಾ ಕಾರ್ಯಕ್ರಮದ ಮೂಲಕ ಊರ ಜನರೆಲ್ಲಾ ಒಂದಾಗುತ್ತಾರೆ. ಸಂಘಟನೆಯ ದೃಷ್ಟಿಯಿಂದ ಆರಂಭವಾದ ಭಜನಾ ಕಾರ್ಯಕ್ರಮ ಇಂದಿಗೂ ಮಹತ್ವ ಪಡೆದಿದೆ. ಜನರು ಸಂಭ್ರಮದಿಂದ ಭಾಗವಹಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದಲ್ಲಿ ಅಡಿಕೆ ಕೃಷಿ ಹೇಗಿದೆ..? ಎಷ್ಟು ಉತ್ಪಾದನೆಯಾಗುತ್ತಿದೆ…?

970 ರ ದಶಕದಿಂದ ಹಿಡಿದು ಈ ತನಕ ಇಲಾಖೆಗಳು,ಸರಕಾರಗಳು,ಹಿರಿಯರು ಹೇಳುತ್ತಾ ಬಂದದ್ದು ವಿಸ್ತರಣೆ…

1 hour ago

ಹೊಸರುಚಿ | ಹಲಸಿನ ಬೀಜದ ಚಟ್ಟಂಬಡೆ

ಹಲಸಿನ ಬೀಜದ ಚಟ್ಟಂಬಡೆ :  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : …

2 hours ago

ಮನೆಯಲ್ಲಿ ಯಾವ ಬಣ್ಣದ ಗೋಡೆಗಳು ಗ್ರಹಗಳ ಶಕ್ತಿಯನ್ನು ಸಂತೋಲನಗೊಳಿಸಿ ಯಶಸ್ಸನ್ನು ತರುತ್ತವೆ?

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯಶಾಸ್ತ್ರದಲ್ಲಿ, ಮನೆಯ ಗೋಡೆಗಳ ಬಣ್ಣವು ಕೇವಲ ಸೌಂದರ್ಯಕ್ಕೆ ಸೀಮಿತವಾಗಿಲ್ಲ,…

2 hours ago

ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ

ನೀರು ಕಲ್ಲಿಗಿಂತ ಮೆದುವಾದರೂ, ನಿರಂತರತೆಯಿಂದ ಕಲ್ಲನ್ನೂ ಕೊರೆಯಬಲ್ಲದು. ನಿರಂತರತೆಗೆ ಇರುವ ಶಕ್ತಿ ಅಪಾರ.…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಸುಚನ್ಯ

ಸುಚನ್ಯ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ , | ಕ್ರಿಯೇಟಿವ್‌…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪೃಥ್ವಿ ಜಿ ಎಂ

ಪೃಥ್ವಿ ಜಿ ಎಂ, 6 ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಸುಬ್ರಹ್ಮಣ್ಯ |…

11 hours ago