Advertisement
ವಿಶೇಷ ವರದಿಗಳು

65 ವರ್ಷಗಳಿಂದ ಜನರನ್ನು ಒಂದಾಗಿಸುತ್ತಿರುವ “ಭಜನೆ ” | ಕೊಕ್ಕಡದಲ್ಲೊಂದು ಸಂಭ್ರಮದ ಉತ್ಸವ |

Share

ಒಂದೆರಡಲ್ಲ…! ಬರೋಬ್ಬರಿ 65 ವರ್ಷಗಳಿಂದ ಭಜನೆ ನಡೆಯುತ್ತಿದೆ ಇಲ್ಲಿ..!, ಈ ಮೂಲಕ ಜನರು ಒಂದಾಗುತ್ತಿದ್ದಾರೆ. ಜಾತಿಯ ಬೇಧವಿಲ್ಲದೆ ಒಂದಾಗಿಸುವ ಈ ಭಜನೆ ಇಲ್ಲಿ ಒಂದು ಉತ್ಸವ..!. ಇಂತಹ ಸಂಭ್ರಮ ನಡೆಯುತ್ತಿರುವುದು ಕೊಕ್ಕಡದಲ್ಲಿ.

Advertisement
Advertisement

ವಿಶ್ವ ಹಿಂದೂ ಪರಿಷದ್ ಕೊಕ್ಕಡ ಮತ್ತು ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ವತಿಯಿಂದ ನಡೆಯುತ್ತಿರುವ 65ನೇ ವರ್ಷದ ಸಾರ್ವಜನಿಕ ಭಜನಾ ಸಂಕೀರ್ತನೆ ನಡೆಯಿತು. ಸುಮಾರು 65 ವರ್ಷಗಳ ಹಿಂದೆ ಆರಂಭವಾದ ಈ ನಗರ ಭಜನೆಯು ಕೊಕ್ಕಡದ ಒಂದು ದೊಡ್ಡ ಉತ್ಸವ.

ಸುಮಾರು 60 ರ ದಶಕದಲ್ಲಿ, ಕೊಕ್ಕಡದಲ್ಲಿ ಹಿಂದೂ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಶಿಶಿಲದ ಬರ್ಗುಲ ನಿವಾಸಿ ದಿವಂಗತ ಪುರುಷೋತ್ತಮ ನಾಯಕ್ ಅವರ ಮುಂದಾಳತ್ವದಲ್ಲಿ ಹುಟ್ಟಿಕೊಂಡ ನಗರ ಭಜನೆಯೂ ಇವರ ಸಮಕಾಲೀನರ ಉತ್ಸಾಹದೊಂದಿಗೆ ಇದೀಗ ಭಜನಾ ಸಪ್ತಾಹದ ಮೂಲಕ ಮುಂದುವರೆದುಕೊಂಡು ಬಂದಿದೆ.

ದೀಪಾವಳಿ ನಂತರದ ಮೊದಲ ಷಷ್ಠಿಯಂದು ಸಂಜೆ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವರಿಗೆ ರಂಗಪೂಜೆ ಯನ್ನು ಅರ್ಪಿಸಿ ಭಜನೆ ಆರಂಭಗೊಳ್ಳುತ್ತದೆ. ಬಳಿಕ ಎರಡನೆಯ ದಿನ ಸಂಜೆ ಶಿಶಿಲದ ಬರ್ಗುಲದಲ್ಲಿರುವ ದಿವಂಗತ ಪುರುಷೋತ್ತಮ ನಾಯಕರ ಮನೆಯಲ್ಲಿರುವ ರಾಮ ಸೀತೆ ಲಕ್ಷ್ಮಣ ಮತ್ತು ಹನುಮಂತರ ಬೆಳ್ಳಿಯ ಭಾವಚಿತ್ರದೊಂದಿಗೆ ಮನೆಯಿಂದ ಕೊಕ್ಕಡದವರೆಗೆ ಶೋಭ ಯಾತ್ರೆಯ ಮೂಲಕ ವೈಭವಪೂರಿತವಾಗಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ಪ್ರವೇಶಿಸುತ್ತದೆ.

ಪ್ರಾರ್ಥನೆಯ ಬಳಿಕ ಅಲ್ಲಿ ಭಜನೆಗಳನ್ನು ನಡೆಸಿ ಬೆಳ್ಳಿಯ ರಥದಲ್ಲಿ ದೇವರು ಸಮೇತ ಅಶ್ವತ್ಥಕಟ್ಟೆ ವರೆಗೆ ಕುಣಿತ ಭಜನೆಯ ಮೂಲಕ ಸಾಗಿ ಬಳಿಕ ಅಲ್ಲಿ ಪೂಜೆ ನೆರವೇರಿಸಿ ಕಾರ್ತಿಕ ಕಟ್ಟೆಯವರೆಗೆ ಭಜನೆಯು ಸಾಗುತ್ತದೆ. ನಂತರ ಅಲ್ಲಿಂದ ಹರಿಹರ ಕಟ್ಟೆಗೆ ಭಜನಾರ್ಥಿಗಳು ಸಾಗಿ ಮತ್ತೆ ಭಜನಾ ಮಂದಿರಕ್ಕೆ ಬಂದು ಅಲ್ಲಿ ದೇವರನ್ನು ಇರಿಸಿ, ದೇವರ ಸುತ್ತಲೂ ಕುಣಿತ ಭಜನೆ ಯನ್ನು ಆರಂಭಿಸುತ್ತಾರೆ. ಹೀಗೆ ಸುಮಾರು 3 ಗಂಟೆಗಳಿಗಿಂತ ಹೆಚ್ಚು ಕಾಲ ಭಜನೆ ಮುಂದುವರೆಯುತ್ತದೆ.

ವಾರಗಳ ಕಾಲ ನಡೆಯುವ ಭಜನಾ ಸಂಕೀರ್ತನೆಯಲ್ಲಿ ಪ್ರತಿನಿತ್ಯ ಇನ್ನೂರರಿಂದ ಮುನ್ನೂರು ಜನರು ಭಾಗವಹಿಸುತ್ತಾರೆ. ಈ ಭಜನಾ ಕಾರ್ಯಕ್ರಮದ ಮೂಲಕ ಊರ ಜನರೆಲ್ಲಾ ಒಂದಾಗುತ್ತಾರೆ. ಸಂಘಟನೆಯ ದೃಷ್ಟಿಯಿಂದ ಆರಂಭವಾದ ಭಜನಾ ಕಾರ್ಯಕ್ರಮ ಇಂದಿಗೂ ಮಹತ್ವ ಪಡೆದಿದೆ. ಜನರು ಸಂಭ್ರಮದಿಂದ ಭಾಗವಹಿಸುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

6 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

6 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago