Advertisement
ವಿಶೇಷ ವರದಿಗಳು

65 ವರ್ಷಗಳಿಂದ ಜನರನ್ನು ಒಂದಾಗಿಸುತ್ತಿರುವ “ಭಜನೆ ” | ಕೊಕ್ಕಡದಲ್ಲೊಂದು ಸಂಭ್ರಮದ ಉತ್ಸವ |

Share

ಒಂದೆರಡಲ್ಲ…! ಬರೋಬ್ಬರಿ 65 ವರ್ಷಗಳಿಂದ ಭಜನೆ ನಡೆಯುತ್ತಿದೆ ಇಲ್ಲಿ..!, ಈ ಮೂಲಕ ಜನರು ಒಂದಾಗುತ್ತಿದ್ದಾರೆ. ಜಾತಿಯ ಬೇಧವಿಲ್ಲದೆ ಒಂದಾಗಿಸುವ ಈ ಭಜನೆ ಇಲ್ಲಿ ಒಂದು ಉತ್ಸವ..!. ಇಂತಹ ಸಂಭ್ರಮ ನಡೆಯುತ್ತಿರುವುದು ಕೊಕ್ಕಡದಲ್ಲಿ.

ವಿಶ್ವ ಹಿಂದೂ ಪರಿಷದ್ ಕೊಕ್ಕಡ ಮತ್ತು ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ವತಿಯಿಂದ ನಡೆಯುತ್ತಿರುವ 65ನೇ ವರ್ಷದ ಸಾರ್ವಜನಿಕ ಭಜನಾ ಸಂಕೀರ್ತನೆ ನಡೆಯಿತು. ಸುಮಾರು 65 ವರ್ಷಗಳ ಹಿಂದೆ ಆರಂಭವಾದ ಈ ನಗರ ಭಜನೆಯು ಕೊಕ್ಕಡದ ಒಂದು ದೊಡ್ಡ ಉತ್ಸವ.

ಸುಮಾರು 60 ರ ದಶಕದಲ್ಲಿ, ಕೊಕ್ಕಡದಲ್ಲಿ ಹಿಂದೂ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಶಿಶಿಲದ ಬರ್ಗುಲ ನಿವಾಸಿ ದಿವಂಗತ ಪುರುಷೋತ್ತಮ ನಾಯಕ್ ಅವರ ಮುಂದಾಳತ್ವದಲ್ಲಿ ಹುಟ್ಟಿಕೊಂಡ ನಗರ ಭಜನೆಯೂ ಇವರ ಸಮಕಾಲೀನರ ಉತ್ಸಾಹದೊಂದಿಗೆ ಇದೀಗ ಭಜನಾ ಸಪ್ತಾಹದ ಮೂಲಕ ಮುಂದುವರೆದುಕೊಂಡು ಬಂದಿದೆ.

ದೀಪಾವಳಿ ನಂತರದ ಮೊದಲ ಷಷ್ಠಿಯಂದು ಸಂಜೆ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವರಿಗೆ ರಂಗಪೂಜೆ ಯನ್ನು ಅರ್ಪಿಸಿ ಭಜನೆ ಆರಂಭಗೊಳ್ಳುತ್ತದೆ. ಬಳಿಕ ಎರಡನೆಯ ದಿನ ಸಂಜೆ ಶಿಶಿಲದ ಬರ್ಗುಲದಲ್ಲಿರುವ ದಿವಂಗತ ಪುರುಷೋತ್ತಮ ನಾಯಕರ ಮನೆಯಲ್ಲಿರುವ ರಾಮ ಸೀತೆ ಲಕ್ಷ್ಮಣ ಮತ್ತು ಹನುಮಂತರ ಬೆಳ್ಳಿಯ ಭಾವಚಿತ್ರದೊಂದಿಗೆ ಮನೆಯಿಂದ ಕೊಕ್ಕಡದವರೆಗೆ ಶೋಭ ಯಾತ್ರೆಯ ಮೂಲಕ ವೈಭವಪೂರಿತವಾಗಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ಪ್ರವೇಶಿಸುತ್ತದೆ.

ಪ್ರಾರ್ಥನೆಯ ಬಳಿಕ ಅಲ್ಲಿ ಭಜನೆಗಳನ್ನು ನಡೆಸಿ ಬೆಳ್ಳಿಯ ರಥದಲ್ಲಿ ದೇವರು ಸಮೇತ ಅಶ್ವತ್ಥಕಟ್ಟೆ ವರೆಗೆ ಕುಣಿತ ಭಜನೆಯ ಮೂಲಕ ಸಾಗಿ ಬಳಿಕ ಅಲ್ಲಿ ಪೂಜೆ ನೆರವೇರಿಸಿ ಕಾರ್ತಿಕ ಕಟ್ಟೆಯವರೆಗೆ ಭಜನೆಯು ಸಾಗುತ್ತದೆ. ನಂತರ ಅಲ್ಲಿಂದ ಹರಿಹರ ಕಟ್ಟೆಗೆ ಭಜನಾರ್ಥಿಗಳು ಸಾಗಿ ಮತ್ತೆ ಭಜನಾ ಮಂದಿರಕ್ಕೆ ಬಂದು ಅಲ್ಲಿ ದೇವರನ್ನು ಇರಿಸಿ, ದೇವರ ಸುತ್ತಲೂ ಕುಣಿತ ಭಜನೆ ಯನ್ನು ಆರಂಭಿಸುತ್ತಾರೆ. ಹೀಗೆ ಸುಮಾರು 3 ಗಂಟೆಗಳಿಗಿಂತ ಹೆಚ್ಚು ಕಾಲ ಭಜನೆ ಮುಂದುವರೆಯುತ್ತದೆ.

ವಾರಗಳ ಕಾಲ ನಡೆಯುವ ಭಜನಾ ಸಂಕೀರ್ತನೆಯಲ್ಲಿ ಪ್ರತಿನಿತ್ಯ ಇನ್ನೂರರಿಂದ ಮುನ್ನೂರು ಜನರು ಭಾಗವಹಿಸುತ್ತಾರೆ. ಈ ಭಜನಾ ಕಾರ್ಯಕ್ರಮದ ಮೂಲಕ ಊರ ಜನರೆಲ್ಲಾ ಒಂದಾಗುತ್ತಾರೆ. ಸಂಘಟನೆಯ ದೃಷ್ಟಿಯಿಂದ ಆರಂಭವಾದ ಭಜನಾ ಕಾರ್ಯಕ್ರಮ ಇಂದಿಗೂ ಮಹತ್ವ ಪಡೆದಿದೆ. ಜನರು ಸಂಭ್ರಮದಿಂದ ಭಾಗವಹಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

3 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

5 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

6 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago