Advertisement
ವಿಶೇಷ ವರದಿಗಳು

65 ವರ್ಷಗಳಿಂದ ಜನರನ್ನು ಒಂದಾಗಿಸುತ್ತಿರುವ “ಭಜನೆ ” | ಕೊಕ್ಕಡದಲ್ಲೊಂದು ಸಂಭ್ರಮದ ಉತ್ಸವ |

Share

ಒಂದೆರಡಲ್ಲ…! ಬರೋಬ್ಬರಿ 65 ವರ್ಷಗಳಿಂದ ಭಜನೆ ನಡೆಯುತ್ತಿದೆ ಇಲ್ಲಿ..!, ಈ ಮೂಲಕ ಜನರು ಒಂದಾಗುತ್ತಿದ್ದಾರೆ. ಜಾತಿಯ ಬೇಧವಿಲ್ಲದೆ ಒಂದಾಗಿಸುವ ಈ ಭಜನೆ ಇಲ್ಲಿ ಒಂದು ಉತ್ಸವ..!. ಇಂತಹ ಸಂಭ್ರಮ ನಡೆಯುತ್ತಿರುವುದು ಕೊಕ್ಕಡದಲ್ಲಿ.

Advertisement

ವಿಶ್ವ ಹಿಂದೂ ಪರಿಷದ್ ಕೊಕ್ಕಡ ಮತ್ತು ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ವತಿಯಿಂದ ನಡೆಯುತ್ತಿರುವ 65ನೇ ವರ್ಷದ ಸಾರ್ವಜನಿಕ ಭಜನಾ ಸಂಕೀರ್ತನೆ ನಡೆಯಿತು. ಸುಮಾರು 65 ವರ್ಷಗಳ ಹಿಂದೆ ಆರಂಭವಾದ ಈ ನಗರ ಭಜನೆಯು ಕೊಕ್ಕಡದ ಒಂದು ದೊಡ್ಡ ಉತ್ಸವ.

ಸುಮಾರು 60 ರ ದಶಕದಲ್ಲಿ, ಕೊಕ್ಕಡದಲ್ಲಿ ಹಿಂದೂ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಶಿಶಿಲದ ಬರ್ಗುಲ ನಿವಾಸಿ ದಿವಂಗತ ಪುರುಷೋತ್ತಮ ನಾಯಕ್ ಅವರ ಮುಂದಾಳತ್ವದಲ್ಲಿ ಹುಟ್ಟಿಕೊಂಡ ನಗರ ಭಜನೆಯೂ ಇವರ ಸಮಕಾಲೀನರ ಉತ್ಸಾಹದೊಂದಿಗೆ ಇದೀಗ ಭಜನಾ ಸಪ್ತಾಹದ ಮೂಲಕ ಮುಂದುವರೆದುಕೊಂಡು ಬಂದಿದೆ.

ದೀಪಾವಳಿ ನಂತರದ ಮೊದಲ ಷಷ್ಠಿಯಂದು ಸಂಜೆ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವರಿಗೆ ರಂಗಪೂಜೆ ಯನ್ನು ಅರ್ಪಿಸಿ ಭಜನೆ ಆರಂಭಗೊಳ್ಳುತ್ತದೆ. ಬಳಿಕ ಎರಡನೆಯ ದಿನ ಸಂಜೆ ಶಿಶಿಲದ ಬರ್ಗುಲದಲ್ಲಿರುವ ದಿವಂಗತ ಪುರುಷೋತ್ತಮ ನಾಯಕರ ಮನೆಯಲ್ಲಿರುವ ರಾಮ ಸೀತೆ ಲಕ್ಷ್ಮಣ ಮತ್ತು ಹನುಮಂತರ ಬೆಳ್ಳಿಯ ಭಾವಚಿತ್ರದೊಂದಿಗೆ ಮನೆಯಿಂದ ಕೊಕ್ಕಡದವರೆಗೆ ಶೋಭ ಯಾತ್ರೆಯ ಮೂಲಕ ವೈಭವಪೂರಿತವಾಗಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ಪ್ರವೇಶಿಸುತ್ತದೆ.

ಪ್ರಾರ್ಥನೆಯ ಬಳಿಕ ಅಲ್ಲಿ ಭಜನೆಗಳನ್ನು ನಡೆಸಿ ಬೆಳ್ಳಿಯ ರಥದಲ್ಲಿ ದೇವರು ಸಮೇತ ಅಶ್ವತ್ಥಕಟ್ಟೆ ವರೆಗೆ ಕುಣಿತ ಭಜನೆಯ ಮೂಲಕ ಸಾಗಿ ಬಳಿಕ ಅಲ್ಲಿ ಪೂಜೆ ನೆರವೇರಿಸಿ ಕಾರ್ತಿಕ ಕಟ್ಟೆಯವರೆಗೆ ಭಜನೆಯು ಸಾಗುತ್ತದೆ. ನಂತರ ಅಲ್ಲಿಂದ ಹರಿಹರ ಕಟ್ಟೆಗೆ ಭಜನಾರ್ಥಿಗಳು ಸಾಗಿ ಮತ್ತೆ ಭಜನಾ ಮಂದಿರಕ್ಕೆ ಬಂದು ಅಲ್ಲಿ ದೇವರನ್ನು ಇರಿಸಿ, ದೇವರ ಸುತ್ತಲೂ ಕುಣಿತ ಭಜನೆ ಯನ್ನು ಆರಂಭಿಸುತ್ತಾರೆ. ಹೀಗೆ ಸುಮಾರು 3 ಗಂಟೆಗಳಿಗಿಂತ ಹೆಚ್ಚು ಕಾಲ ಭಜನೆ ಮುಂದುವರೆಯುತ್ತದೆ.

ವಾರಗಳ ಕಾಲ ನಡೆಯುವ ಭಜನಾ ಸಂಕೀರ್ತನೆಯಲ್ಲಿ ಪ್ರತಿನಿತ್ಯ ಇನ್ನೂರರಿಂದ ಮುನ್ನೂರು ಜನರು ಭಾಗವಹಿಸುತ್ತಾರೆ. ಈ ಭಜನಾ ಕಾರ್ಯಕ್ರಮದ ಮೂಲಕ ಊರ ಜನರೆಲ್ಲಾ ಒಂದಾಗುತ್ತಾರೆ. ಸಂಘಟನೆಯ ದೃಷ್ಟಿಯಿಂದ ಆರಂಭವಾದ ಭಜನಾ ಕಾರ್ಯಕ್ರಮ ಇಂದಿಗೂ ಮಹತ್ವ ಪಡೆದಿದೆ. ಜನರು ಸಂಭ್ರಮದಿಂದ ಭಾಗವಹಿಸುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

1 hour ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

1 hour ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

17 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

18 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

18 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

18 hours ago