ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ ನಡೆಯುವ ಭಾರತ್ ಬಂದ್ನಲ್ಲಿ ಸುಮಾರು 25 ಕೋಟಿಗೂ ಅಧಿಕ ಕಾರ್ಮಿಕರು ಭಾಗವಹಿಸುವ ಸಾಧ್ಯತೆಗಳಿವೆ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಮತ್ತು ಕಾರ್ಪೋರೇಟ್ ಪರವಾದ ನೀತಿಯನ್ನು ಖಂಡಿಸಿ ಒಟ್ಟು 10 ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ್ ಬಂದ್ಗೆ ಕರೆ ನೀಡಿವೆ. ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗ ಹೆಚ್ಚುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳು ಏರುತ್ತಿವೆ, ವೇತನ ಕುಸಿಯುತ್ತಿದೆ ಮತ್ತು ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ನಾಗರಿಕ ಸೌಲಭ್ಯಗಳ ಮೇಲಿನ ಸಾಮಾಜಿಕ ವಲಯದ ವೆಚ್ಚವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆಗಳ ವೇದಿಕೆ ಆರೋಪಿಸಿದೆ. ಭಾರತ್ ಬಂದ್ ಕಾರಣದಿಂದ ಬ್ಯಾಂಕಿಂಗ್, ವಿಮೆ, ಅಂಚೆ ಕಚೇರಿ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಸಿಟಿಜನ್ ನ್ಯೂಸ್ ಪುತ್ತೂರು ನಲ್ಲಿದೆ.. ಲಿಂಕ್ ಇಲ್ಲಿದೆ… https://www.citizennewsputtur.com/2025/07/bharat-bandh-2025-strike-july-9-what-to.html#
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…