ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ ನಡೆಯುವ ಭಾರತ್ ಬಂದ್ನಲ್ಲಿ ಸುಮಾರು 25 ಕೋಟಿಗೂ ಅಧಿಕ ಕಾರ್ಮಿಕರು ಭಾಗವಹಿಸುವ ಸಾಧ್ಯತೆಗಳಿವೆ. ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ರೈತ ವಿರೋಧಿ ನೀತಿ ಮತ್ತು ಕಾರ್ಪೋರೇಟ್ ಪರವಾದ ನೀತಿಯನ್ನು ಖಂಡಿಸಿ ಒಟ್ಟು 10 ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ್ ಬಂದ್ಗೆ ಕರೆ ನೀಡಿವೆ. ಕೇಂದ್ರ ಸರ್ಕಾರ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಆರ್ಥಿಕ ನೀತಿಗಳಿಂದಾಗಿ ನಿರುದ್ಯೋಗ ಹೆಚ್ಚುತ್ತಿದೆ. ಅಗತ್ಯ ವಸ್ತುಗಳ ಬೆಲೆಗಳು ಏರುತ್ತಿವೆ, ವೇತನ ಕುಸಿಯುತ್ತಿದೆ ಮತ್ತು ಶಿಕ್ಷಣ, ಆರೋಗ್ಯ ಮತ್ತು ಮೂಲಭೂತ ನಾಗರಿಕ ಸೌಲಭ್ಯಗಳ ಮೇಲಿನ ಸಾಮಾಜಿಕ ವಲಯದ ವೆಚ್ಚವನ್ನು ಕಡಿತಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಸಂಘಟನೆಗಳ ವೇದಿಕೆ ಆರೋಪಿಸಿದೆ. ಭಾರತ್ ಬಂದ್ ಕಾರಣದಿಂದ ಬ್ಯಾಂಕಿಂಗ್, ವಿಮೆ, ಅಂಚೆ ಕಚೇರಿ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಸಿಟಿಜನ್ ನ್ಯೂಸ್ ಪುತ್ತೂರು ನಲ್ಲಿದೆ.. ಲಿಂಕ್ ಇಲ್ಲಿದೆ… https://www.citizennewsputtur.com/2025/07/bharat-bandh-2025-strike-july-9-what-to.html#
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…