ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|

May 29, 2025
7:37 AM

ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ ಸಿಂಗ್ ದೆಹಲಿಯಲ್ಲಿ  ಚಾಲನೆ ನೀಡಿದರು.

Advertisement

ಬಳಿಕ ಮಾತನಾಡಿದ ಅವರು, BSF ವ್ಯವಸ್ಥೆ , ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದು, ಇದರಿಂದ ಅತ್ಯಧಿಕ ಮಳೆ ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸ್ಥಿತಿಗತಿಗಳನ್ನು ಅರಿಯಲು ಹಾಗೂ ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ ಎಂದರು. ಈ ಹವಾಮಾನ ಮುನ್ಸೂಚನಾ ವ್ಯವಸ್ಥೆ, ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳನ್ನು ಅತ್ಯಂತ ನಿಖರವಾಗಿ ಅರಿಯಲು ಸಹಾಯ ಮಾಡುತ್ತದೆ. ಈ ವ್ಯವಸ್ಥೆಯನ್ನು 2022ರಿಂದ ಪ್ರಾಯೋಗಿಕವಾಗಿ ಪರಿಚಯಿಸಲಾಗಿತ್ತು. ಇದೀಗ ಅದನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲಾಗಿದೆ. ಇದು ಮುಂಗಾರು ಮಳೆಯ ಮೇಲೆ ನಿಗಾ ಇರಿಸುವುದು. ಚಂಡಮಾರುತಗಳನ್ನು ಅರಿಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಕೃಷಿ, ವಿಪತ್ತು ನಿರ್ವಹಣೆ, ಪ್ರವಾಹ ಮುನ್ನೆಚ್ಚರಿಕೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ.

ಭಾರತ್ ಮುನ್ಸೂಚನೆ ವ್ಯವಸ್ಥೆ ಎಂದರೇನು: ಇದು ವಿಶ್ವದ ಅತ್ಯುನ್ನತ ಹವಾಮಾನ ಮುನ್ಸೂಚನೆಯ ಮಾದರಿ.  ಭಾರತದ ಹೊಸ ಹೈ-ರೆಸಲ್ಯೂಶನ್ BSF ಮಾದರಿಯು ಪಂಚಾಯತ್ ಮಟ್ಟದಲ್ಲಿ 6-ಕಿಮೀ ನಿಖರತೆಯ ಮುನ್ಸೂಚನೆಗಳನ್ನು ನೀಡುತ್ತದೆ, ಇದು ಯುರೋಪಿಯನ್, ಬ್ರಿಟಿಷ್ ಮೊದಲಾದ ಹವಾಮಾನ  ವ್ಯವಸ್ಥೆಗಳನ್ನು ನಿಖರತೆಯಲ್ಲಿ ಮೀರಿಸುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಈಗ ಬಿಡುಗಡೆ ಮಾಡಿದ ವಿಶ್ವದ ಮೊದಲ ಸ್ಥಳೀಯ ಹೈ-ರೆಸಲ್ಯೂಶನ್ ಹವಾಮಾನ ಮಾದರಿ, ಭಾರತ್ ಮುನ್ಸೂಚನೆ ವ್ಯವಸ್ಥೆ(BSF) ಅನ್ನು ಪುಣೆಯ ಸಂಸ್ಥೆ ಅಭಿವೃದ್ಧಿಪಡಿಸಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ
July 3, 2025
11:38 PM
by: The Rural Mirror ಸುದ್ದಿಜಾಲ
ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!
July 3, 2025
2:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2025 | ಇಂದು ಸಾಮಾನ್ಯ ಮಳೆ | ಜು.6 ರ ನಂತರ ಮಲೆನಾಡು-ಕರಾವಳಿ ಹವಾಮಾನ ಹೇಗೆ ? | ಜು.4 ರಿಂದ ಒಳನಾಡು ವಾತಾವರಣ ಹೇಗೆ ?
July 3, 2025
12:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group