ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|

May 29, 2025
7:37 AM

ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ ಸಿಂಗ್ ದೆಹಲಿಯಲ್ಲಿ  ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, BSF ವ್ಯವಸ್ಥೆ , ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದು, ಇದರಿಂದ ಅತ್ಯಧಿಕ ಮಳೆ ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸ್ಥಿತಿಗತಿಗಳನ್ನು ಅರಿಯಲು ಹಾಗೂ ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ ಎಂದರು. ಈ ಹವಾಮಾನ ಮುನ್ಸೂಚನಾ ವ್ಯವಸ್ಥೆ, ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳನ್ನು ಅತ್ಯಂತ ನಿಖರವಾಗಿ ಅರಿಯಲು ಸಹಾಯ ಮಾಡುತ್ತದೆ. ಈ ವ್ಯವಸ್ಥೆಯನ್ನು 2022ರಿಂದ ಪ್ರಾಯೋಗಿಕವಾಗಿ ಪರಿಚಯಿಸಲಾಗಿತ್ತು. ಇದೀಗ ಅದನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲಾಗಿದೆ. ಇದು ಮುಂಗಾರು ಮಳೆಯ ಮೇಲೆ ನಿಗಾ ಇರಿಸುವುದು. ಚಂಡಮಾರುತಗಳನ್ನು ಅರಿಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಕೃಷಿ, ವಿಪತ್ತು ನಿರ್ವಹಣೆ, ಪ್ರವಾಹ ಮುನ್ನೆಚ್ಚರಿಕೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ.

ಭಾರತ್ ಮುನ್ಸೂಚನೆ ವ್ಯವಸ್ಥೆ ಎಂದರೇನು: ಇದು ವಿಶ್ವದ ಅತ್ಯುನ್ನತ ಹವಾಮಾನ ಮುನ್ಸೂಚನೆಯ ಮಾದರಿ.  ಭಾರತದ ಹೊಸ ಹೈ-ರೆಸಲ್ಯೂಶನ್ BSF ಮಾದರಿಯು ಪಂಚಾಯತ್ ಮಟ್ಟದಲ್ಲಿ 6-ಕಿಮೀ ನಿಖರತೆಯ ಮುನ್ಸೂಚನೆಗಳನ್ನು ನೀಡುತ್ತದೆ, ಇದು ಯುರೋಪಿಯನ್, ಬ್ರಿಟಿಷ್ ಮೊದಲಾದ ಹವಾಮಾನ  ವ್ಯವಸ್ಥೆಗಳನ್ನು ನಿಖರತೆಯಲ್ಲಿ ಮೀರಿಸುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಈಗ ಬಿಡುಗಡೆ ಮಾಡಿದ ವಿಶ್ವದ ಮೊದಲ ಸ್ಥಳೀಯ ಹೈ-ರೆಸಲ್ಯೂಶನ್ ಹವಾಮಾನ ಮಾದರಿ, ಭಾರತ್ ಮುನ್ಸೂಚನೆ ವ್ಯವಸ್ಥೆ(BSF) ಅನ್ನು ಪುಣೆಯ ಸಂಸ್ಥೆ ಅಭಿವೃದ್ಧಿಪಡಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror