MIRROR FOCUS

ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ ಸಿಂಗ್ ದೆಹಲಿಯಲ್ಲಿ  ಚಾಲನೆ ನೀಡಿದರು.

Advertisement

ಬಳಿಕ ಮಾತನಾಡಿದ ಅವರು, BSF ವ್ಯವಸ್ಥೆ , ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದು, ಇದರಿಂದ ಅತ್ಯಧಿಕ ಮಳೆ ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸ್ಥಿತಿಗತಿಗಳನ್ನು ಅರಿಯಲು ಹಾಗೂ ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ ಎಂದರು. ಈ ಹವಾಮಾನ ಮುನ್ಸೂಚನಾ ವ್ಯವಸ್ಥೆ, ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳನ್ನು ಅತ್ಯಂತ ನಿಖರವಾಗಿ ಅರಿಯಲು ಸಹಾಯ ಮಾಡುತ್ತದೆ. ಈ ವ್ಯವಸ್ಥೆಯನ್ನು 2022ರಿಂದ ಪ್ರಾಯೋಗಿಕವಾಗಿ ಪರಿಚಯಿಸಲಾಗಿತ್ತು. ಇದೀಗ ಅದನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲಾಗಿದೆ. ಇದು ಮುಂಗಾರು ಮಳೆಯ ಮೇಲೆ ನಿಗಾ ಇರಿಸುವುದು. ಚಂಡಮಾರುತಗಳನ್ನು ಅರಿಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಕೃಷಿ, ವಿಪತ್ತು ನಿರ್ವಹಣೆ, ಪ್ರವಾಹ ಮುನ್ನೆಚ್ಚರಿಕೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ.

ಭಾರತ್ ಮುನ್ಸೂಚನೆ ವ್ಯವಸ್ಥೆ ಎಂದರೇನು: ಇದು ವಿಶ್ವದ ಅತ್ಯುನ್ನತ ಹವಾಮಾನ ಮುನ್ಸೂಚನೆಯ ಮಾದರಿ.  ಭಾರತದ ಹೊಸ ಹೈ-ರೆಸಲ್ಯೂಶನ್ BSF ಮಾದರಿಯು ಪಂಚಾಯತ್ ಮಟ್ಟದಲ್ಲಿ 6-ಕಿಮೀ ನಿಖರತೆಯ ಮುನ್ಸೂಚನೆಗಳನ್ನು ನೀಡುತ್ತದೆ, ಇದು ಯುರೋಪಿಯನ್, ಬ್ರಿಟಿಷ್ ಮೊದಲಾದ ಹವಾಮಾನ  ವ್ಯವಸ್ಥೆಗಳನ್ನು ನಿಖರತೆಯಲ್ಲಿ ಮೀರಿಸುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಈಗ ಬಿಡುಗಡೆ ಮಾಡಿದ ವಿಶ್ವದ ಮೊದಲ ಸ್ಥಳೀಯ ಹೈ-ರೆಸಲ್ಯೂಶನ್ ಹವಾಮಾನ ಮಾದರಿ, ಭಾರತ್ ಮುನ್ಸೂಚನೆ ವ್ಯವಸ್ಥೆ(BSF) ಅನ್ನು ಪುಣೆಯ ಸಂಸ್ಥೆ ಅಭಿವೃದ್ಧಿಪಡಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಚಂದನ್‌ ಕೆ ಪಿ

ಚಂದನ್‌ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…

6 hours ago

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ

ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…

7 hours ago

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |

ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…

21 hours ago

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?

ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…

22 hours ago

ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago