ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ ಸಿಂಗ್ ದೆಹಲಿಯಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, BSF ವ್ಯವಸ್ಥೆ , ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದು, ಇದರಿಂದ ಅತ್ಯಧಿಕ ಮಳೆ ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸ್ಥಿತಿಗತಿಗಳನ್ನು ಅರಿಯಲು ಹಾಗೂ ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ ಎಂದರು. ಈ ಹವಾಮಾನ ಮುನ್ಸೂಚನಾ ವ್ಯವಸ್ಥೆ, ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳನ್ನು ಅತ್ಯಂತ ನಿಖರವಾಗಿ ಅರಿಯಲು ಸಹಾಯ ಮಾಡುತ್ತದೆ. ಈ ವ್ಯವಸ್ಥೆಯನ್ನು 2022ರಿಂದ ಪ್ರಾಯೋಗಿಕವಾಗಿ ಪರಿಚಯಿಸಲಾಗಿತ್ತು. ಇದೀಗ ಅದನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲಾಗಿದೆ. ಇದು ಮುಂಗಾರು ಮಳೆಯ ಮೇಲೆ ನಿಗಾ ಇರಿಸುವುದು. ಚಂಡಮಾರುತಗಳನ್ನು ಅರಿಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಕೃಷಿ, ವಿಪತ್ತು ನಿರ್ವಹಣೆ, ಪ್ರವಾಹ ಮುನ್ನೆಚ್ಚರಿಕೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ.
ಭಾರತ್ ಮುನ್ಸೂಚನೆ ವ್ಯವಸ್ಥೆ ಎಂದರೇನು: ಇದು ವಿಶ್ವದ ಅತ್ಯುನ್ನತ ಹವಾಮಾನ ಮುನ್ಸೂಚನೆಯ ಮಾದರಿ. ಭಾರತದ ಹೊಸ ಹೈ-ರೆಸಲ್ಯೂಶನ್ BSF ಮಾದರಿಯು ಪಂಚಾಯತ್ ಮಟ್ಟದಲ್ಲಿ 6-ಕಿಮೀ ನಿಖರತೆಯ ಮುನ್ಸೂಚನೆಗಳನ್ನು ನೀಡುತ್ತದೆ, ಇದು ಯುರೋಪಿಯನ್, ಬ್ರಿಟಿಷ್ ಮೊದಲಾದ ಹವಾಮಾನ ವ್ಯವಸ್ಥೆಗಳನ್ನು ನಿಖರತೆಯಲ್ಲಿ ಮೀರಿಸುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಈಗ ಬಿಡುಗಡೆ ಮಾಡಿದ ವಿಶ್ವದ ಮೊದಲ ಸ್ಥಳೀಯ ಹೈ-ರೆಸಲ್ಯೂಶನ್ ಹವಾಮಾನ ಮಾದರಿ, ಭಾರತ್ ಮುನ್ಸೂಚನೆ ವ್ಯವಸ್ಥೆ(BSF) ಅನ್ನು ಪುಣೆಯ ಸಂಸ್ಥೆ ಅಭಿವೃದ್ಧಿಪಡಿಸಿದೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…