Advertisement
MIRROR FOCUS

ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|

Share

ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ ಸಿಂಗ್ ದೆಹಲಿಯಲ್ಲಿ  ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, BSF ವ್ಯವಸ್ಥೆ , ಪಂಚಾಯಿತಿ ಮಟ್ಟದಲ್ಲಿ ಕಾರ್ಯ ನಿರ್ವಹಣೆ ಮಾಡಲಿದ್ದು, ಇದರಿಂದ ಅತ್ಯಧಿಕ ಮಳೆ ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸ್ಥಿತಿಗತಿಗಳನ್ನು ಅರಿಯಲು ಹಾಗೂ ಅದಕ್ಕೆ ತಕ್ಕಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ ಎಂದರು. ಈ ಹವಾಮಾನ ಮುನ್ಸೂಚನಾ ವ್ಯವಸ್ಥೆ, ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳನ್ನು ಅತ್ಯಂತ ನಿಖರವಾಗಿ ಅರಿಯಲು ಸಹಾಯ ಮಾಡುತ್ತದೆ. ಈ ವ್ಯವಸ್ಥೆಯನ್ನು 2022ರಿಂದ ಪ್ರಾಯೋಗಿಕವಾಗಿ ಪರಿಚಯಿಸಲಾಗಿತ್ತು. ಇದೀಗ ಅದನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲಾಗಿದೆ. ಇದು ಮುಂಗಾರು ಮಳೆಯ ಮೇಲೆ ನಿಗಾ ಇರಿಸುವುದು. ಚಂಡಮಾರುತಗಳನ್ನು ಅರಿಯಲು ಸಹಾಯ ಮಾಡುತ್ತದೆ. ಇದರಿಂದಾಗಿ ಕೃಷಿ, ವಿಪತ್ತು ನಿರ್ವಹಣೆ, ಪ್ರವಾಹ ಮುನ್ನೆಚ್ಚರಿಕೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಲು ಸಹಾಯಕವಾಗುತ್ತದೆ.

ಭಾರತ್ ಮುನ್ಸೂಚನೆ ವ್ಯವಸ್ಥೆ ಎಂದರೇನು: ಇದು ವಿಶ್ವದ ಅತ್ಯುನ್ನತ ಹವಾಮಾನ ಮುನ್ಸೂಚನೆಯ ಮಾದರಿ.  ಭಾರತದ ಹೊಸ ಹೈ-ರೆಸಲ್ಯೂಶನ್ BSF ಮಾದರಿಯು ಪಂಚಾಯತ್ ಮಟ್ಟದಲ್ಲಿ 6-ಕಿಮೀ ನಿಖರತೆಯ ಮುನ್ಸೂಚನೆಗಳನ್ನು ನೀಡುತ್ತದೆ, ಇದು ಯುರೋಪಿಯನ್, ಬ್ರಿಟಿಷ್ ಮೊದಲಾದ ಹವಾಮಾನ  ವ್ಯವಸ್ಥೆಗಳನ್ನು ನಿಖರತೆಯಲ್ಲಿ ಮೀರಿಸುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯವು ಈಗ ಬಿಡುಗಡೆ ಮಾಡಿದ ವಿಶ್ವದ ಮೊದಲ ಸ್ಥಳೀಯ ಹೈ-ರೆಸಲ್ಯೂಶನ್ ಹವಾಮಾನ ಮಾದರಿ, ಭಾರತ್ ಮುನ್ಸೂಚನೆ ವ್ಯವಸ್ಥೆ(BSF) ಅನ್ನು ಪುಣೆಯ ಸಂಸ್ಥೆ ಅಭಿವೃದ್ಧಿಪಡಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

7 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

16 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

17 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

21 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

21 hours ago