ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಯಾತ್ರೆ ನಡೆಸಿದ ಯುವಕನ ಮೇಲೆ ಎಫ್ಐಆರ್ ದಾಖಲಾಗಿದೆ.
ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಡೋ ಯಾತ್ರೆಯಲ್ಲಿ ಈತ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಯಾತ್ರೆ ಮಾಡಿದ್ದು, ಬಿಜೆಪಿ 40% ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದರು.
ಗುಂಡ್ಲುಪೇಟೆ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬುವರು ಚಾಮರಾಜನಗರ ಸಿಇಎನ್ ಠಾಣೆಗೆ ದೂರು ನೀಡಿದ್ದು, ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಶೀಘ್ರವಾಗಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.ಈ ಬಗ್ಗೆ ಯುವಕನ ವಿರುದ್ಧ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…