Opinion

ಕೃಷಿ ಕ್ರಾಂತಿ ಆರಂಭವಾಗುವುದು ಹೀಗೆ….! | ಆಗ್ರೋ ಸಂಸ್ಥೆಯ ಈ ಕಾರ್ಯಕ್ರಮದಲ್ಲಿ ಇಷ್ಟೊಂದು ಕೃಷಿಕರು ಸೇರಿದ್ದೇಕೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲವು ಸಲ ಕೃಷಿ ಕ್ರಾಂತಿಯ ಬಗ್ಗೆ ಮಾತುಗಳು ಕೇಳುತ್ತವೆ. ಒಂದು ಸಂಸ್ಥೆಯೂ ಕೃಷಿ ಕ್ರಾಂತಿಗೆ ಕಾರಣವಾಗುತ್ತದೆ. ಕೃಷಿಕ ತಾನು ಬೆಳೆದ ಹಾಗೂ ತನಗೆ ನೆರವಾದ ಸಂಸ್ಥೆಗಳನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾನೆ. ಇದಕ್ಕೊಂದು ಉದಾಹರಣೆ ಸುಳ್ಯದಲ್ಲಿ ಕಂಡಿತು. ಸುಳ್ಯದ ಭಾರತ್‌ ಆಗ್ರೋ ಸರ್ವೀಸಸ್‌ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಅದು. ನಡು ಮಧ್ಯಾಹ್ನದಿಂದ ತಡರಾತ್ರಿಯವರೆಗೆ ನಡೆದ ಕಾರ್ಯಕ್ರಮದ ಸಭಾಭವನದ ತುಂಬಾ ಕೃಷಿಕರು ಭಾಗವಹಿಸಿದ್ದರು. ಇದು ಕೃಷಿಕ ಹಾಗೂ ಒಂದು ಸಂಸ್ಥೆಯ ನಡುವಿನ ಒಡನಾಟ-ಸಂಬಂಧ.

Advertisement
Advertisement

ಸುಳ್ಯದ ಆಗ್ರೋ ಸರ್ವೀಸಸ್‌ ಸಂಸ್ಥೆ ಆರಂಭವಾಗಿ 50 ವರ್ಷಗಳು ಸಂದವು. ಸುಳ್ಯ ಕೃಷಿ ಪ್ರದಾನವಾದ ಊರು. ಬಹುತೇಕ ಗ್ರಾಮೀಣ ಪ್ರದೇಶವನ್ನು ಹೊಂದಿದೆ. ಸುಮಾರು 50 ವರ್ಷಗಳ ಹಿಂದೆ ಸುಳ್ಯ ಇನ್ನಷ್ಟು ಗ್ರಾಮೀಣ ಭಾಗದಿಂದಲೇ ಇತ್ತು, ಮೂಲಭೂತ ಸೌಲಭ್ಯಗಳ ನಿರೀಕ್ಷೆಯಲ್ಲಿಯೇ ಇತ್ತು. ಇಂದು ಬೆಳೆಯುತ್ತಾ ಸಾಗಿದೆ, ಅದರಲ್ಲಿ ಕೃಷಿಯೂ ಬೆಳೆದಿದೆ. ಉಳಿದೆಲ್ಲಾ ಬೆಳವಣಿಗೆಗೆ ಇಲ್ಲಿನ ವಿವಿಧ ಸಾಮಾಜಿಕ ಮುಖಂಡರು ಕೆಲಸ ಮಾಡಿದ್ದರೆ ಕೃಷಿ ಬೆಳವಣಿಗೆಗೆ ಆಗ್ರೋ ಸಂಸ್ಥೆ ಕಾರಣವಾಗಿದೆ. ಹೊಸ ಹೊಸ ಪ್ರಯೋಗಗಳನ್ನು ಕೃಷಿಕರಿಗೆ ಪರಿಚಯಿಸಿದೆ. ಹೀಗಾಗಿ ರೈತರ ಒಡನಾಟದ ಸಂಸ್ಥೆಯಾಗಿದೆ. ಹೀಗಾಗಿ ಈಗ 50 ನೇ ವರ್ಷದ ಸಂದರ್ಭ ಆಗ್ರೋ ಸಂಸ್ಥೆಯ ಮಾಲಕ ರಾಮಚಂದ್ರ ಪಿ ಅವರ ಆಹ್ವಾನವನ್ನು ಗೌರವಿಸಿ ಅನೇಕ ರೈತರು ಕಾರ್ಯಕ್ರಮದ ಆರಂಭದಿಂದ ಕೊನೆಯವರೆಗೆ ಭಾಗವಹಿಸಿದರು.

ಕೃಷಿ ಚಿಂತನ

ಇಡೀ ಕಾರ್ಯಕ್ರಮ ಆರಂಭವಾದ್ದೇ ಕೃಷಿ ಚಿಂತನದ ಮೂಲಕ. ಇಂದಿನ ಆವಶ್ಯಕತೆಗಳಲ್ಲಿ ಒಂದಾದ ನೀರಾವರಿ ವಿಷಯವೇ ಚಿಂತನದ ವಿಷಯವಾಗಿತ್ತು. ಮಧ್ಯಾಹ್ನ 3.30 ಕ್ಕೆ ಈ ಕಾರ್ಯಕ್ರಮ ಆರಂಭ. ಕೃಷಿ ಕಾರ್ಯಕ್ರಮ ಎಂದರೆ ಕೃಷಿಕರು ಸೇರುವುದು ಕಷ್ಟ. ತುರ್ತು ಕಾರ್ಯದ ನಡುವೆ ಆಸಕ್ತ ಕೃಷಿಕರು ಬರುತ್ತಾರೆ. ಹಾಗಾಗಿ ಎಲ್ಲೆಡೆಯೂ ಕೃಷಿ ಗೋಷ್ಟಿಗಳು ವಿಫಲ ಕಾಣುತ್ತದೆ. ಆದರೆ ಆಗ್ರೋ ಸುವರ್ಣ ಸಂಭ್ರಮದಲ್ಲಿ ಕೃಷಿ ಗೋಷ್ಟಿಗೇ ಕೃಷಿಕರು ಭಾಗವಹಿಸಿ ಆಸಕ್ತಿಯಿಂದ ಯುವ ಸಂಪನ್ಮೂಲ ವ್ಯಕ್ತಿಗಳ ಅನುಭವ ಕೇಳುತ್ತಿದ್ದರು. ನೀರಾವರಿ ವಿಷಯವೂ ಇಂದು ಕೃಷಿಕರಿಗೆ ಅಗತ್ಯವಾದ ವಿಷಯವೂ ಆಗಿದೆ. ಹೀಗಾಗಿ ಸಂಸ್ಥೆಯೊಂದು ಕೃಷಿಕರ ಪರವಾಗಿ ಹೇಗೆ ಬೆಳೆಯುಬಹುದು ಎನ್ನುದಕ್ಕೂ ಇದೊಂದು ಮಾದರಿ ಕಾರ್ಯಕ್ರಮ.

ಕೃಷಿಕರ ಸಂಸ್ಥೆಯೊಂದು ರೈತಪರವಾಗಿ ಹೇಗೆ ಬೆಳೆಯಬಹುದು ಹಾಗೂ ಆ ಸಂಸ್ಥೆಯ ಪ್ರೀತಿಗೆ ಅಷ್ಟೂ ಜನ ಕಾರ್ಯಕ್ರಮಕ್ಕ ಬರಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ. ಉದ್ಯಮ ಬೆಳೆಯಬೇಕು, ಕೃಷಿಯೂ ಬೆಳೆಯಬೇಕು. ಇದೆರಡೂ ಜೊತೆಯಾಗಿ ಸಾಗಿದರೆ ಮಾತ್ರವೇ ಅಲ್ಲಿ ಪ್ರೀತಿಯೂ ಬೆಳೆಯುತ್ತದೆ. ಅಂತಹದ್ದೊಂದು ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಸುಳ್ಯದ ಕೃಷಿ ಬೆಳೆವಣಿಗೆಯಲ್ಲಿ ಇಂತಹ ಹಲವು ಸಂಸ್ಥೆಗಳ ಪಾಲು ಇದೆ ಎನ್ನುವುದೂ ಸತ್ಯ. ಆಗ್ರೋದಂತಹ ಸಂಸ್ಥೆಗಳು 50 ವರ್ಷಗಳಿಂದ ಕೃಷಿಕರ ಗೂಗಲ್‌ ಆಗಿತ್ತು. ಏನು ಕೇಳಿದರೂ ಅಲ್ಲಿದೆ ಎನ್ನುವುದೇ ಕೃಷಿಕರ ನಂಬಿಕೆಯಾಗಿತ್ತು, ಅದೇ ವಿಶ್ವಾಸ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

5 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

13 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

19 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago