ಭಾರತೀಯ ಕಿಸಾನ್ ಸಂಘ, ಎಣ್ಮೂರು ವಲಯದ ವತಿಯಿಂದ ಪುತ್ತೂರು ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಅವರಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಳಾಯಿತ್ತೋಡಿಯಲ್ಲಿ ನಿರ್ಮಾಣವಾಗಲಿರುವ 33 ಕೆ.ವಿ. ವಿದ್ಯುತ್ ಉಪಕೇಂದ್ರದ ಪ್ರಗತಿಯ ಬಗ್ಗೆ ವಿಚಾರಿಸಿ, ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಮೆಸ್ಕಾಂ ಸುಬ್ರಹ್ಮಣ್ಯ ವಿಭಾಗದ ಎ.ಇ. ಅವರೊಂದಿಗೂ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿಕೊಟ್ಟು ಕುಳಾಯಿತ್ತೋಡಿ ವಿದ್ಯತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸಲಾಯಿತು. ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಅಧ್ಯಕ್ಷ ಶ್ರೀನಂದನ.ಕೆ ಇವರು ಮನವಿಯನ್ನು ಹಸ್ತಾಂತರಿಸಿದರು. ಭಾರತೀಯ ಕಿಸಾನ್ ಸಂಘ ಸುಳ್ಯದ ಅಧ್ಯಕ್ಷರಾದ ಎಂ.ಜಿ.ಪ್ರಭಾಕರ ರೈ, ಸದಸ್ಯರಾದ ನೆಟ್ಟಾರು ಗೋಪಾಲಕೃಷ್ಣ ಭಟ್, ಕರ್ವಂಕಲ್ಲು ಗೋಪಾಲಕೃಷ್ಣ ಭಟ್, ಸೀತಾರಾಮ, ಪಿ.ಆರ್.ಭಟ್ ದೇವಸ್ಯ, ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಕಾರ್ಯದರ್ಶಿ ಯತಿರಾಜ ಜೊತೆಗಿದ್ದರು.