ಭಾರತೀಯ ಕಿಸಾನ್ ಸಂಘ, ಎಣ್ಮೂರು ವಲಯದ ವತಿಯಿಂದ ಪುತ್ತೂರು ವಿಭಾಗ ಕಾರ್ಯನಿರ್ವಾಹಕ ಇಂಜಿನಿಯರ್ ಅವರಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಳಾಯಿತ್ತೋಡಿಯಲ್ಲಿ ನಿರ್ಮಾಣವಾಗಲಿರುವ 33 ಕೆ.ವಿ. ವಿದ್ಯುತ್ ಉಪಕೇಂದ್ರದ ಪ್ರಗತಿಯ ಬಗ್ಗೆ ವಿಚಾರಿಸಿ, ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಮೆಸ್ಕಾಂ ಸುಬ್ರಹ್ಮಣ್ಯ ವಿಭಾಗದ ಎ.ಇ. ಅವರೊಂದಿಗೂ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿಕೊಟ್ಟು ಕುಳಾಯಿತ್ತೋಡಿ ವಿದ್ಯತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸಲಾಯಿತು. ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಅಧ್ಯಕ್ಷ ಶ್ರೀನಂದನ.ಕೆ ಇವರು ಮನವಿಯನ್ನು ಹಸ್ತಾಂತರಿಸಿದರು. ಭಾರತೀಯ ಕಿಸಾನ್ ಸಂಘ ಸುಳ್ಯದ ಅಧ್ಯಕ್ಷರಾದ ಎಂ.ಜಿ.ಪ್ರಭಾಕರ ರೈ, ಸದಸ್ಯರಾದ ನೆಟ್ಟಾರು ಗೋಪಾಲಕೃಷ್ಣ ಭಟ್, ಕರ್ವಂಕಲ್ಲು ಗೋಪಾಲಕೃಷ್ಣ ಭಟ್, ಸೀತಾರಾಮ, ಪಿ.ಆರ್.ಭಟ್ ದೇವಸ್ಯ, ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಕಾರ್ಯದರ್ಶಿ ಯತಿರಾಜ ಜೊತೆಗಿದ್ದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…