ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಸಲುವಾಗಿ ದೇಶದಾದ್ಯಂತ ಚಳವಳಿ ರೂಪದಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಆಯಾ ತಾಲೂಕು ತಹಶೀಲ್ದಾರವರ ಮೂಲಕ ಮನವಿ ಸಲ್ಲಿಸುವ ಕಾರ್ಯಕ್ರಮ ಭಾರತೀಯ ಕಿಸಾನ್ ಸಂಘದ ಮೂಲಕ ನಡೆಸಲಾಯಿತು.
ಇದರ ಅಂಗವಾಗಿ ಸುಳ್ಯ ತಾಲೂಕು ಭಾರತೀಯ ಕಿಸಾನ್ ಸಂಘ ಸಹ ಸುಳ್ಯ ತಹಶೀಲ್ದಾರರ ಮೂಲಕ ಮಾನ್ಯ ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಪ್ರಭಾಕರ ರೈ, ಕಾರ್ಯದರ್ಶಿ ಸಾಯಿಶೇಖರ ಕರಿಕಳ, ಕೋಶಾಧಿಕಾರಿ ಸೀತಾರಾಮ್, ನಿಕಟಪೂರ್ವ ಕಾರ್ಯದರ್ಶಿಗಳಾದ ನೆಟ್ಟಾರು ಗೋಪಾಲಕೃಷ್ಣ ಭಟ್ ಹಾಗೂ ಬಾಳಿಲ ಮುಪ್ಪೇರ್ಯ ಸಮಿತಿಯ ಅಧ್ಯಕ್ಷರಾದ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಭಾಗವಹಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel