ಸುಳ್ಯ ತಾಲೂಕಿನ ನೀರಾವರಿ ಕೃಷಿ ಪಂಪ್ ಸೆಟ್ಟುಗಳ 2003 ರಿಂದ 2008 ರ ಅವಧಿಯ ವಿದ್ಯುತ್ ಶುಲ್ಕ ಬಾಕಿಯನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ಸುಳ್ಯ ತಾಲೂಕಿನ ಭಾರತೀಯ ಕಿಸಾನ್ ಸಂಘದ ನಿಯೋಗವು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್ ಇವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.
ಕೃಷಿ ಪಂಪ್ಸೆಟ್ಟುಗಳು ಬಾಕಿಯನ್ನು ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮನ್ನಾ ಮಾಡಲಾಗಿತ್ತು. ಹಾಗಿದ್ದರೂ ಸುಳ್ಯ ತಾಲೂಕಿನ ಕೃಷಿ ಪಂಪುಸೆಟ್ಟುಗಳ ಬಾಕಿ ಮನ್ನಾ ಆಗಿರದೆ, ಈಗಲೂ ಹಳೆ ಬಾಕಿ ಎಂದು ನಮೂದಾಗುತ್ತಿತ್ತು.ಇದರಿಂದ ಕೃಷಿಕರ ಕೃಷಿ ಪಂಪ್ ಸೆಟ್ಟುಗಳ ಖಾತೆ ವರ್ಗಾವಣೆಯಾಗುವ ಸಂದರ್ಭ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಭಾ ಕಿ ಸಂ ಈ ಬಾಕಿಯನ್ನು ಸುಳ್ಯ ತಾಲೂಕಿನಲ್ಲೂ ಮನ್ನಾ ಮಾಡುವಂತೆ ಮನವಿ ಮಾಡಿದೆ.ಮನವಿ ನೀಡಿದ ವೇಳೆ ಸಚಿವರು ಮೆಸ್ಕಾಂ ಆಢಳಿತ ನಿರ್ದೇಶಕರ ಜೊತೆ ವಿಮರ್ಶಿಸಿ ಮನ್ನಾ ಮಾಡುವ ಭರವಸೆಯನ್ನು ನೀಡಿದರು. ಇದೇ ವೇಳೆ ಸುಳ್ಯ ತಾಲೂಕಿನ ನಿಂತಿಕಲ್ಲು ಸಮೀಪ ಕುಳಾಯಿತ್ತೋಡಿಯಲ್ಲಿ ಸ್ಥಾಪನೆಯಾಗಬೇಕಾದ 33 ಕೆ. ವಿ. ಉಪ ವಿದ್ಯುತ್ ಕೇಂದ್ರದ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು.
18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…
ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490