ಸುಳ್ಯ ತಾಲೂಕಿನ ನೀರಾವರಿ ಕೃಷಿ ಪಂಪ್ ಸೆಟ್ಟುಗಳ 2003 ರಿಂದ 2008 ರ ಅವಧಿಯ ವಿದ್ಯುತ್ ಶುಲ್ಕ ಬಾಕಿಯನ್ನು ಮನ್ನಾ ಮಾಡುವಂತೆ ಒತ್ತಾಯಿಸಿ ಸುಳ್ಯ ತಾಲೂಕಿನ ಭಾರತೀಯ ಕಿಸಾನ್ ಸಂಘದ ನಿಯೋಗವು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್ ಇವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದರು.
ಕೃಷಿ ಪಂಪ್ಸೆಟ್ಟುಗಳು ಬಾಕಿಯನ್ನು ದ ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮನ್ನಾ ಮಾಡಲಾಗಿತ್ತು. ಹಾಗಿದ್ದರೂ ಸುಳ್ಯ ತಾಲೂಕಿನ ಕೃಷಿ ಪಂಪುಸೆಟ್ಟುಗಳ ಬಾಕಿ ಮನ್ನಾ ಆಗಿರದೆ, ಈಗಲೂ ಹಳೆ ಬಾಕಿ ಎಂದು ನಮೂದಾಗುತ್ತಿತ್ತು.ಇದರಿಂದ ಕೃಷಿಕರ ಕೃಷಿ ಪಂಪ್ ಸೆಟ್ಟುಗಳ ಖಾತೆ ವರ್ಗಾವಣೆಯಾಗುವ ಸಂದರ್ಭ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಭಾ ಕಿ ಸಂ ಈ ಬಾಕಿಯನ್ನು ಸುಳ್ಯ ತಾಲೂಕಿನಲ್ಲೂ ಮನ್ನಾ ಮಾಡುವಂತೆ ಮನವಿ ಮಾಡಿದೆ.ಮನವಿ ನೀಡಿದ ವೇಳೆ ಸಚಿವರು ಮೆಸ್ಕಾಂ ಆಢಳಿತ ನಿರ್ದೇಶಕರ ಜೊತೆ ವಿಮರ್ಶಿಸಿ ಮನ್ನಾ ಮಾಡುವ ಭರವಸೆಯನ್ನು ನೀಡಿದರು. ಇದೇ ವೇಳೆ ಸುಳ್ಯ ತಾಲೂಕಿನ ನಿಂತಿಕಲ್ಲು ಸಮೀಪ ಕುಳಾಯಿತ್ತೋಡಿಯಲ್ಲಿ ಸ್ಥಾಪನೆಯಾಗಬೇಕಾದ 33 ಕೆ. ವಿ. ಉಪ ವಿದ್ಯುತ್ ಕೇಂದ್ರದ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು.
ನಿಯೋಗದಲ್ಲಿ ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕಿನ ಅಧ್ಯಕ್ಷರಾದ ಎನ್. ಜಿ. ಪ್ರಭಾಕರ ರೈ, ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ. ಜಿ. ಎಸ್. ಎನ್. ಪ್ರಸಾದ್, ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕಿನ ಕಾರ್ಯದರ್ಶಿ ಬಿ. ಸಾಯಿಶೇಖರ್, ಖಜಾಂಚಿ ಕೆ. ಸೀತಾರಾಮ್, ನಿಕಟಪೂರ್ವ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ಭಟ್ ನೆಟ್ಟಾರು, ಸದಸ್ಯರಾದ ಗೋಪಾಲಕೃಷ್ಣ ಭಟ್ ಕರುವಂಕಲ್ಲು, ಗಬ್ಲಡ್ಕ ಸದಾಶಿವ ಭಟ್, ಯತಿರಾಜ್ ಓಣಿಯಡ್ಕ ಭಾಗವಹಿಸಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…