ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.
ಭಾಕಿಸಂ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೃಷಿಕ ರಮೇಶ್ ದೇಲಂಪಾಡಿ ಉದ್ಘಾಟಿಸಿದರು. ಇದೇ ವೇಳೆ ಹೈನುಗಾರಿಕೆ ಬಗ್ಗೆ ಕೃಷಿಕ ಹಿಂದಾರು ಜಯಗುರು ಆಚಾರ್ ಮಾಹಿತಿ ನೀಡಿದರು.ಭಾಕಿಸಂ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಕುಮ್ಕಿ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭ ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು.
ಭಾಕಿಸಂ ಬಾಳಿಲ ಘಟಕದ ಅಧ್ಯಕ್ಷ ರಾಜಾರಾಮ ನಿಡ್ಮಾರು ಸ್ವಾಗತಿಸಿ ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ತಾಲೂಕು ಕಾರ್ಯದರ್ಶಿ ಸಾಯಿಶೇಖರ ಕರಿಕಳ ನಿರೂಪಿಸಿದರು.ಪ್ರಸನ್ನ ಬಿಎಸ್ ಹಾಗೂ ಪವನ ಬಿಎಸ್ ಪ್ರಾರ್ಥಿಸಿದರು.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…