ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.
ಭಾಕಿಸಂ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೃಷಿಕ ರಮೇಶ್ ದೇಲಂಪಾಡಿ ಉದ್ಘಾಟಿಸಿದರು. ಇದೇ ವೇಳೆ ಹೈನುಗಾರಿಕೆ ಬಗ್ಗೆ ಕೃಷಿಕ ಹಿಂದಾರು ಜಯಗುರು ಆಚಾರ್ ಮಾಹಿತಿ ನೀಡಿದರು.ಭಾಕಿಸಂ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಕುಮ್ಕಿ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭ ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು.
ಭಾಕಿಸಂ ಬಾಳಿಲ ಘಟಕದ ಅಧ್ಯಕ್ಷ ರಾಜಾರಾಮ ನಿಡ್ಮಾರು ಸ್ವಾಗತಿಸಿ ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ತಾಲೂಕು ಕಾರ್ಯದರ್ಶಿ ಸಾಯಿಶೇಖರ ಕರಿಕಳ ನಿರೂಪಿಸಿದರು.ಪ್ರಸನ್ನ ಬಿಎಸ್ ಹಾಗೂ ಪವನ ಬಿಎಸ್ ಪ್ರಾರ್ಥಿಸಿದರು.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…