ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.
ಭಾಕಿಸಂ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೃಷಿಕ ರಮೇಶ್ ದೇಲಂಪಾಡಿ ಉದ್ಘಾಟಿಸಿದರು. ಇದೇ ವೇಳೆ ಹೈನುಗಾರಿಕೆ ಬಗ್ಗೆ ಕೃಷಿಕ ಹಿಂದಾರು ಜಯಗುರು ಆಚಾರ್ ಮಾಹಿತಿ ನೀಡಿದರು.ಭಾಕಿಸಂ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಕುಮ್ಕಿ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭ ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು.
ಭಾಕಿಸಂ ಬಾಳಿಲ ಘಟಕದ ಅಧ್ಯಕ್ಷ ರಾಜಾರಾಮ ನಿಡ್ಮಾರು ಸ್ವಾಗತಿಸಿ ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ತಾಲೂಕು ಕಾರ್ಯದರ್ಶಿ ಸಾಯಿಶೇಖರ ಕರಿಕಳ ನಿರೂಪಿಸಿದರು.ಪ್ರಸನ್ನ ಬಿಎಸ್ ಹಾಗೂ ಪವನ ಬಿಎಸ್ ಪ್ರಾರ್ಥಿಸಿದರು.
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…