ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.
ಭಾಕಿಸಂ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೃಷಿಕ ರಮೇಶ್ ದೇಲಂಪಾಡಿ ಉದ್ಘಾಟಿಸಿದರು. ಇದೇ ವೇಳೆ ಹೈನುಗಾರಿಕೆ ಬಗ್ಗೆ ಕೃಷಿಕ ಹಿಂದಾರು ಜಯಗುರು ಆಚಾರ್ ಮಾಹಿತಿ ನೀಡಿದರು.ಭಾಕಿಸಂ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಕುಮ್ಕಿ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭ ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು.
ಭಾಕಿಸಂ ಬಾಳಿಲ ಘಟಕದ ಅಧ್ಯಕ್ಷ ರಾಜಾರಾಮ ನಿಡ್ಮಾರು ಸ್ವಾಗತಿಸಿ ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ತಾಲೂಕು ಕಾರ್ಯದರ್ಶಿ ಸಾಯಿಶೇಖರ ಕರಿಕಳ ನಿರೂಪಿಸಿದರು.ಪ್ರಸನ್ನ ಬಿಎಸ್ ಹಾಗೂ ಪವನ ಬಿಎಸ್ ಪ್ರಾರ್ಥಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…