ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.
ಭಾಕಿಸಂ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೃಷಿಕ ರಮೇಶ್ ದೇಲಂಪಾಡಿ ಉದ್ಘಾಟಿಸಿದರು. ಇದೇ ವೇಳೆ ಹೈನುಗಾರಿಕೆ ಬಗ್ಗೆ ಕೃಷಿಕ ಹಿಂದಾರು ಜಯಗುರು ಆಚಾರ್ ಮಾಹಿತಿ ನೀಡಿದರು.ಭಾಕಿಸಂ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಕುಮ್ಕಿ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭ ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು.
ಭಾಕಿಸಂ ಬಾಳಿಲ ಘಟಕದ ಅಧ್ಯಕ್ಷ ರಾಜಾರಾಮ ನಿಡ್ಮಾರು ಸ್ವಾಗತಿಸಿ ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ತಾಲೂಕು ಕಾರ್ಯದರ್ಶಿ ಸಾಯಿಶೇಖರ ಕರಿಕಳ ನಿರೂಪಿಸಿದರು.ಪ್ರಸನ್ನ ಬಿಎಸ್ ಹಾಗೂ ಪವನ ಬಿಎಸ್ ಪ್ರಾರ್ಥಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…