ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…