ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…