ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…