ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…